HEALTH TIPS

ದೇಶ ಸಾಕಷ್ಟು ಬೆಳೆದಿದೆ ಮತ್ತು ಇಂದು ಭಾರತ ವಿಶ್ವದ ಅತಿದೊಡ್ಡ ಆರ್ಥಿಕ ಮತ್ತು ಮಿಲಿಟರಿ ಶಕ್ತಿಗಳಲ್ಲಿ ಸ್ಥಾನ ಪಡೆದಿದೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

             ತಿರುವನಂತಪುರ: ಭಾರತ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬುದಕ್ಕೆ ಭಾರತೀಯರು ಹೆಮ್ಮೆ ಪಡಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.

          ನಮ್ಮೊಂದಿಗೆ ಸ್ವಾತಂತ್ರ್ಯ ಗಳಿಸಿದ ಹಲವು ದೇಶಗಳು ಬಿಕ್ಕಟ್ಟಿನಲ್ಲಿರುವಾಗಲೂ ನಾವು ಅಭಿವೃದ್ದಿಯ ವೇಗದಲ್ಲಿದ್ದೇವೆ. ವಿವಿಧತೆಯಲ್ಲಿ ಏಕತೆ ನಮ್ಮ ದೇಶದ ಲಕ್ಷಣ. ಸ್ವಾತಂತ್ರ್ಯವನ್ನು ಎಲ್ಲರೂ ಸಮಾನವಾಗಿ ಹೇಳಿಕೊಳ್ಳಬಹುದು ಎಂದು ಅವರು ಹೇಳಿದರು.

            ತಿರುವನಂತಪುರ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

          1947 ರಿಂದ 2023 ರವರೆಗೆ ದೇಶವು ಸಾಕಷ್ಟು ಬೆಳೆದಿದೆ. ಇಂದು, ಭಾರತವು ವಿಶ್ವದ ಅತಿದೊಡ್ಡ ಆರ್ಥಿಕ ಮತ್ತು ಮಿಲಿಟರಿ ಶಕ್ತಿಗಳಲ್ಲಿ ಒಂದಾಗಿದೆ. ಆಯುರ್ವೇದ ಮತ್ತು ಯೋಗ ಎಲ್ಲವೂ ವಿಶ್ವದ ಅಗ್ರಸ್ಥಾನದಲ್ಲಿದೆ. ನಮ್ಮ ತಂತ್ರಜ್ಞಾನವು ಬಾಹ್ಯಾಕಾಶ ಮತ್ತು ಚಂದ್ರನನ್ನು ತಲುಪಿದೆ. ಆರ್ಥಿಕ, ಸಾಮಾಜಿಕ, ವೈಜ್ಞಾನಿಕ ಕ್ಷೇತ್ರಗಳಲ್ಲಿ ಮತ್ತಷ್ಟು ಪ್ರಗತಿ ಸಾಧಿಸಬೇಕಿದೆ ಎಂದು ಮುಖ್ಯಮಂತ್ರಿ ಹೇಳಿದರು.

        ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಧ್ವಜಾರೋಹಣ ಮಾಡಿದರು. ವಿವಿಧ ಸಶಸ್ತ್ರ ಪಡೆಗಳು ಮತ್ತು ಇತರ ಸಶಸ್ತ್ರೇತರ ಪಡೆಗಳ ಎನ್‍ಸಿಸಿ, ಸ್ಕೌಟ್ಸ್, ಗೈಡ್ಸ್ ಮತ್ತು ವಿದ್ಯಾರ್ಥಿ ಪೋಲೀಸ್ ಕೆಡೆಟ್‍ಗಳ ಮೆರವಣಿಗೆಗೆ ಅವರು ವಂದಿಸಿದರು. ವಿಶೇಷ ಸೇವೆಗಾಗಿ ರಾಷ್ಟ್ರಪತಿಗಳ ಪೋಲೀಸ್ ಪದಕಗಳು, ಅಗ್ನಿಶಾಮಕ ಸೇವಾ ಪದಕಗಳು, ಸುಧಾರಣಾ ಸೇವಾ ಪದಕಗಳು ಮತ್ತು ಜೀವ ರಕ್ಷಕ ಪದಕಗಳನ್ನು ಮುಖ್ಯಮಂತ್ರಿ ಪ್ರದಾನ ಮಾಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries