HEALTH TIPS

ಸಂವಿಧಾನ, ಪ್ರಜಾಪ್ರಭುತ್ವ ಎತ್ತಿ ಹಿಡಿಯುವ ಪ್ರತಿಜ್ಞೆ ಮಾಡಿದ್ದೇವೆ: ಖರ್ಗೆ

          ವದೆಹಲಿ: ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದ್ದು ಅವುಗಳನ್ನು ರಕ್ಷಣೆಗೆ ಕಟಿಬದ್ದರಾಗಿದ್ದೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.

              ಸ್ವಾತಂತ್ರ್ಯ ದಿನದ ಅಂಗವಾಗಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮತನಾಡಿದ ಅವರು, ಸ್ವಾತಂತ್ರ್ಯದ ಹೋರಾಟದ ವೇಳೆ ಮಡಿದವರ ತ್ಯಾಗವನ್ನು ನೆನಪಿಸಿಕೊಂಡರು.

ಅವರು ರಾಷ್ಟ್ರೀಯ ಚಳವಳಿಗೆ ಕೊಡುಗೆ ಕೊಟ್ಟರಲ್ಲದೆ, ದೇಶಕ್ಕೆ ಗಟ್ಟಿಯಾದ ಅಡಿಪಾಯ ಹಾಕಿಕೊಟ್ಟರು ಎಂದು ನುಡಿದರು.

             ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಈ ದೇಶದ ಆತ್ಮ. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಸ್ವಾಯತ್ತ ಸಂಸ್ಥೆಗಳು ಅಪಾಯದಲ್ಲಿದೆ ಎಂದು ಹೇಳಲು ನೋವಾಗುತ್ತಿದೆ. ಸ್ವಾತಂತ್ರ್ಯ ದಿನದ ಈ ಸ್ವಾತಂತ್ರ್ಯ ದಿನದಂದು, ನಾವು ಸಂವಿಧಾನ, ಪ್ರಜಾಪ್ರಭುತ್ವ, ಐಕ್ಯತೆ ಹಾಗೂ ಸಮಗ್ರತೆಯನ್ನು ಎತ್ತಿ ಹಿಡಿಯುವ ಪ್ರತಿಜ್ಞೆ ಮಾಡುತ್ತೇವೆ ಎಂದು ಹೇಳಿದರು.

                 ಈ ನಿರ್ಣಯದೊಂದಿಗೆ ಮಗದೊಮ್ಮೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರುತ್ತೇನೆ ಎಂದು ಹೇಳಿದ ಅವರು, ವಿಪಕ್ಷ ಒಕ್ಕೂಟದ ಘೋಷವಾಕ್ಯ 'ಭಾರತ್‌ ಜುಡೇಗಾ, ಇಂಡಿಯಾ ಜೀತೆಗಾ' (ಭಾರತ ಒಂದಾಗಲಿದೆ, ಇಂಡಿಯಾ ಗೆಲ್ಲಲಿದೆ) ಎಂದು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries