HEALTH TIPS

ಓಣಂನಲ್ಲಿ ಯಾರಿಗೂ ಹಸಿವಿನಿಂದ ಇರಲು ಅವಕಾಶವಿಲ್ಲ: ಕೆಎಸ್‍ಆರ್‍ಟಿಸಿ ನೌಕರರಿಗೆ ಕೂಡಲೇ ವೇತನ ಪಾವತಿಸುವಂತೆ ಹೈಕೋರ್ಟ್ ಸೂಚನೆ

                     ಕೊಚ್ಚಿ: ಓಣಂ ಹಬ್ಬದ ಸಂದರ್ಭ ಯಾರೂ ಹಸಿವಿನಿಂದ ಇರಲು ಅವಕಾಶ ನೀಡಬಾರದು ಮತ್ತು ನೌಕರರಿಗೆ ಪೂರ್ಣ ಸಂಬಳ ನೀಡುವಂತೆ ಕೆಎಸ್‍ಆರ್‍ಟಿಸಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

               ಜನರಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳು ಬೇಕಾಗಿರುವುದರಿಂದ ಕೆಎಸ್‍ಆರ್‍ಟಿಸಿ ಇನ್ನೂ ಅಸ್ತಿತ್ವದಲ್ಲಿದೆ. ಕೆಎಸ್‍ಆರ್‍ಟಿಸಿ ವೇತನದ ಮೊದಲ ಕಂತನ್ನು ಪಾವತಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

             ಸರ್ಕಾರದಿಂದ 130 ಕೋಟಿ ಪಡೆದರೆ ಜುಲೈ ಮತ್ತು ಆಗಸ್ಟ್ ತಿಂಗಳ ಒಟ್ಟು ವೇತನವನ್ನು ಪಾವತಿಸಲು ಸಾಧ್ಯವಾಗುತ್ತದೆ ಎಂದು ಕೆಎಸ್‍ಆರ್‍ಟಿಸಿ ಮಾಹಿತಿ ನೀಡಿದೆ. ಜುಲೈ ತಿಂಗಳ ಪಿಂಚಣಿಯನ್ನು ಕೂಡಲೇ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಕೆಎಸ್‍ಆರ್‍ಟಿಸಿ ವೇತನ ವಿಚಾರವನ್ನು ಹೈಕೋರ್ಟ್ ಇದೇ 21ಕ್ಕೆ ಮುಂದೂಡಿದೆ.

               ಆರ್ಥಿಕ ಮುಗ್ಗಟ್ಟಿನಿಂದಾಗಿ ವೇತನದಿಂದ ಕಡಿತಗೊಳಿಸಿದ ಮೊತ್ತವನ್ನು ಇತರೆ ಉದ್ದೇಶಗಳಿಗೆ ಬಳಸಿಕೊಳ್ಳುವ ಹಕ್ಕು ಕೆಎಸ್‍ಆರ್‍ಟಿಸಿಗೆ ಇಲ್ಲ ಎಂದು ಹೈಕೋರ್ಟ್ ಈ ಹಿಂದೆ ಸ್ಪಷ್ಟಪಡಿಸಿತ್ತು. ಪಿಂಚಣಿ ಯೋಜನೆ ಮತ್ತು ರಾಜ್ಯ ಜೀವ ವಿಮಾ ಪಾಲಿಸಿಗೆ ಪಾವತಿಸಬೇಕಾದ ನೌಕರರ ವೇತನದಿಂದ ಕಡಿತಗೊಳಿಸಿದ ಮೊತ್ತವನ್ನು ಆರು ತಿಂಗಳೊಳಗೆ ಆಯಾ ಯೋಜನೆಗಳಿಗೆ ಪಾವತಿಸಬೇಕು ಎಂಬ ಏಕ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿಹಿಡಿದು ಅರ್ಜಿಯನ್ನು ವಜಾಗೊಳಿಸಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries