ಶ್ರೀಹರಿಕೋಟ: ಪಿಎಸ್ಎಲ್ವಿ ರಾಕೆಟ್ನಲ್ಲಿ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಹೊತ್ತೊಯ್ದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ಬೇರ್ಪಟ್ಟಿದ್ದು, 125 ದಿನಗಳ ಪ್ರಯಾಣದಲ್ಲಿ ಸೂರ್ಯನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಲಿದೆ ಎಂದು ಇಸ್ರೋ ತಿಳಿಸಿದೆ.
ಬಾಹ್ಯಾಕಾಶ ನೌಕೆಯನ್ನು "ನಿಖರ ಕಕ್ಷೆ" ಯಲ್ಲಿ ಸೇರಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದ್ದಾರೆ. "ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯನ್ನು 235 ರಿಂದ 19,500 ಕಿಮೀ ಉದ್ದದ ದೀರ್ಘವೃತ್ತದ ಕಕ್ಷೆಯಲ್ಲಿ ಸೇರಿಸಲಾಗಿದೆ, ಪಿಎಸ್ಎಲ್ವಿಯಿಂದ ನಿಖರವಾಗಿ ಉದ್ದೇಶಿಸಲಾಗಿತ್ತು ಎಂದು ಅವರು ಹೇಳಿದರು.
ಇನ್ನು ಮುಂದೆ ಆದಿತ್ಯ ಎಲ್1 125 ದಿನಗಳ ಕಾಲ ದೀರ್ಘ ಪ್ರಯಾಣವನ್ನು ನಡೆಸಲಿದೆ ಎಂದು ಸೋಮನಾಥ್ ಅವರು, ಶ್ರೀಹರಿಕೋಟಾದ ಮಿಷನ್ ಕಂಟ್ರೋಲ್ ಸೆಂಟರ್ನಿಂದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಯೋಜನಾ ನಿರ್ದೇಶಕ ನಿಗರ್ ಶಾಜಿ ಮತ್ತು ಮಿಷನ್ ಡೈರೆಕ್ಟರ್ ಬಿಜು ಅವರೊಂದಿಗೆ ಹೇಳಿದರು.
ಪಿಎಸ್ಎಲ್ವಿಯಿಂದ ಬಾಹ್ಯಾಕಾಶ ನೌಕೆಯನ್ನು ದೋಷರಹಿತವಾಗಿ ಕಕ್ಷೆಗೆ ಸೇರಿಸಲಾಗಿದ್ದು, ಸೌರ ಫಲಕಗಳನ್ನು ನಿಯೋಜಿಸಲಾಗಿದೆ ಎಂದು ಶಾಜಿ ಹೇಳಿದರು.
ಸೂರ್ಯನ ಕ್ಷಣ: ಆದಿತ್ಯ ಎಲ್1 ಸೂರ್ಯನಿಗೆ 125 ದಿನಗಳ ದೀರ್ಘ ಪ್ರಯಾಣವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಇಂದಿನ ಸಾಧನೆಯನ್ನು ಸೂರ್ಯನ ಕ್ಷಣ ಎಂದು ಬಣ್ಣಿಸಿದರು. ಬಾಹ್ಯಾಕಾಶ ಕ್ಷೇತ್ರಕ್ಕೆ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು.
ಸೂರ್ಯನು ಅನಿಲದ ದೈತ್ಯ ಗೋಳವಾಗಿದೆ. ಆದಿತ್ಯ-L1 ಅದರ ಹೊರಗಿನ ವಾತಾವರಣವನ್ನು ಅಧ್ಯಯನ ಮಾಡುತ್ತದೆ. ಆದಿತ್ಯ-ಎಲ್1 ಸೂರ್ಯನ ಮೇಲೆ ಇಳಿಯುವುದಿಲ್ಲ ಅಥವಾ ಹತ್ತಿರ ಬರುವುದಿಲ್ಲ ಎಂದು ಇಸ್ರೋ ಹೇಳಿದೆ.
ಇದು ಸೂರ್ಯನಿಗೆ ಅತ್ಯಂತ ಸಮೀಪದಲ್ಲಿರುವ ಲಗ್ರಾಂಜಿಯನ್ ಪಾಯಿಂಟ್ L1 ಸುತ್ತ ಹಾಲೋ ಕಕ್ಷೆಯನ್ನು ತಲುಪಲು ಸುಮಾರು 125 ದಿನಗಳ ಕಾಲ ಪ್ರಯಾಣಿಸುವ ನಿರೀಕ್ಷೆಯಿದೆ. ಸುಮಾರು 1,480.7 ಕೆಜಿ ತೂಕದ ಆದಿತ್ಯ-ಎಲ್1, ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ ಆಧಾರಿತ ವೀಕ್ಷಣಾಲಯವಾಗಿದೆ.