HEALTH TIPS

9ರಂದು ಪೆರ್ಲ ಶಾಲಾ ನೀರಿನ ಓವರ್‍ಹೆಡ್ ಟ್ಯಾಂಕ್ ಉದ್ಘಾಟನೆ

 


                    

                   ಕಾಸರಗೋಡು: ಪೆರ್ಲ ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆಗಾಗಿ ನಿರ್ಮಿಸಲಾದ 35ಸಾವಿರ ಲೀ. ಸಾಮಥ್ರ್ಯದ ನೀರಿನ ಓವರ್‍ಹೆಡ್ ಟ್ಯಾಂಕ್‍ನ ಉದ್ಘಾಟನಾ ಸಮಾರಂಭ ಸೆ. 9ರಂದು ಬೆಳಗ್ಗೆ ಶಾಲಾ ವಠಾರದಲ್ಲಿ ಜರುಗಲಿದೆ. ಬೆಳಗ್ಗೆ 9.30ಕ್ಕೆ ಶ್ರೀಮಹಾಗಣಪತಿ ಹವನ ನಡೆಯುವುದು. ಕಲಾನಿಲಯದಲ್ಲಿ ನಡೆಯುವ ಸಮಾರಂಭದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ, ಪುಂಡಿಕಾಯಿ ನಾರಾಯಣ ಭಟ್ ಉದ್ಘಾಟಿಸುವರು. ಯುಎಇ ಮನಿ ಎಕ್ಸ್‍ಚೇಂಜ್‍ನ ನಿವೃತ್ತ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಎಣ್ಮಕಜೆ ಅಧ್ಯಕ್ಷತೆ ವಹಿಸುವರು.

             ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಪ್ರಭಾವತೀ ಕೆ.ವಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ.ಜಿ ರಾಮ ಭಟ್, ಶಾಲಾ ಪ್ರಬಂಧಕ ಶ್ರೀಕೃಷ್ಣ ವಿಶ್ವಾಮಿತ್ರ, ಆಡಳಿತ ಮಂಡಳಿ ಸದಸ್ಯ ಬಿ.ಎಸ್ ಗಾಂಭಿರ್, ಉಪಾಧ್ಯಕ್ಷ ವೆಂಕಟ್ರಾಜ ಮಿತ್ರ, ಶಾಲಾ ಮುಖ್ಯ ಶಿಕ್ಷಕ ಬಿ. ರಾಜೇಂದ್ರ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಭಟ್ ಕೋಟೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಾರಾಮ ಬಾಳಿಗ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಬಿ.ಎಂ, ಎಂ.ಪಿ.ಟಿಎ ಅಧ್ಯಕ್ಷೆ ಜ್ಯೋತಿಲಕ್ಷ್ಮೀ, ಆಡಳಿತ ಮಂಡಳಿ ಉಪಾಧ್ಯಕ್ಷ ಸದಾಶಿವ ಭಟ್ ಹರಿನಿಲಯ ಪಾಲ್ಗೊಳ್ಳುವರು.

              ಶಾಲಾ ಹಿರಿಯ ವಿದ್ಯಾರ್ಥಿಗಳು, ಪೆರ್ಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ವಿದ್ಯಾ ಪ್ರೇಮಿಗಳ ಕೊಡುಗೆಯನ್ವಯ ಸುಮಾರು 15ಲಕ್ಷ ರೂ. ವೆಚ್ಚದಲ್ಲಿ ನೀರಿನ ಟ್ಯಾಂಕ್ ಹಾಗೂ ಪೈಪ್‍ಲೈನ್ ನಿರ್ಮಾಣಕಾರ್ಯ ನಡೆಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries