HEALTH TIPS

ಒಡೆದ ಮನಸ್ಸುಗಳನ್ನು ಒಟ್ಟುಗೂಡಿಸುವ ಪ್ರಯತ್ನವೇ ಜೋಡೊ ಯಾತ್ರೆ: ಖರ್ಗೆ

             ವದೆಹಲಿ: 'ಭಾರತ್ ಜೋಡೊ ಯಾತ್ರೆ'ಯನ್ನು ಜನಾಂದೋಲನವೆಂದು ಬಣ್ಣಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅದೊಂದು ಭೌತಿಕ ಸಾಹಸ ಮಾತ್ರವಲ್ಲದೇ, ಒಡೆದ ಆತ್ಮಸಾಕ್ಷಿಯನ್ನು ಒಟ್ಟುಗೂಡಿಸುವ ಪ್ರಾಮಾಣಿಕ ಪ್ರಯತ್ನವಾಗಿತ್ತು ಎಂದಿದ್ದಾರೆ.

               ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಸಾಗಿದ ಭಾರತ ಜೋಡೊ ಯಾತ್ರೆಯ ಮೊದಲ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್‌ ಪ್ರಕಟಿಸಿರುವ ಅವರು, 'ಸಮಾಜದಲ್ಲಿನ ದ್ವೇಷ ಮತ್ತು ಹಗೆತನದ‌ ವಿರುದ್ಧ ಸಂವಾದದ ಮೂಲಕ ಹೋರಾಡುವುದನ್ನು ಮುಂದುವರಿಸಲಿದ್ದೇವೆ' ಎಂದು ಹೇಳಿದ್ದಾರೆ.


                'ನ್ಯಾಯ, ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವದ ನಮ್ಮ ಮೂಲ ಮೌಲ್ಯಗಳು ನಮಗೆ ಪ್ರಧಾನವಾದದ್ದು, ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆಯ ಪ್ರಯತ್ನದಲ್ಲಿ ಕಾಂಗ್ರೆಸ್‌ ‍ಪಕ್ಷವು ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುತ್ತದೆ' ಎಂದು ಅವರು ಹೇಳಿದ್ದಾರೆ.

'ದ್ವೇಷ ಮತ್ತು ವಿಭಜನೆಯ ಕಾರ್ಯಸೂಚಿಯನ್ನು ಮರೆಮಾಚುವ ಸಲುವಾಗಿ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರವೃತ್ತಿಯು ನಮ್ಮ ಸಾಕ್ಷಿಪ್ರಜ್ಞೆ ಮೇಲಿನ ವ್ಯವಸ್ಥಿತ ದಾಳಿಯಾಗಿದೆ'ಎಂದು ಖರ್ಗೆ ಹೇಳಿದರು.

              'ದೇಶದಲ್ಲಿನ ಆರ್ಥಿಕ ಅಸಮಾನತೆ, ಬೆಲೆ ಏರಿಕೆ, ನಿರುದ್ಯೋಗ, ಸಾಮಾಜಿಕ ಅನ್ಯಾಯ, ಸಂವಿಧಾನದ ಮೇಲಿನ ದಾಳಿ, ಅಧಿಕಾರದ ಕೇಂದ್ರೀಕರಣದಂಥ ನಿಜವಾದ ಸಮಸ್ಯೆಗಳನ್ನು ಜನರ ಮುಂದಿಡುವ ಪ್ರಯತ್ನವೇ 'ಭಾರತ ಜೋಡೊ' ಆಗಿತ್ತು' ಎಂದು ಖರ್ಗೆ ತಿಳಿಸಿದ್ದಾರೆ.

2022ರ ಸೆಪ್ಟೆಂಬರ್‌ 07ರಂದು ಭಾರತ ಜೋಡೊ ಯಾತ್ರೆ ಆರಂಭವಾಗಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries