HEALTH TIPS

ಕೋಟಾ: ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌

                   ಕೋಟಾ: ರಾಜಸ್ಥಾನದ ಕೋಟಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

               ಕಳೆದ ಕೆಲವು ತಿಂಗಳುಗಳಿಂದ ತರಬೇತಿ ಕೇಂದ್ರದ ಹಾಸ್ಟೆಲ್‌, ಪಿಜಿಗಳಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು.


                ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಉಪರಾಷ್ಟ್ರಪತಿಗಳು ಸಂವಾದ ನಡೆಸಿದರು.

                'ಸೋಲಿನ ಬಗ್ಗೆ ಭಯಪಡಬಾರದು, ಜಗತ್ತಿನಲ್ಲಿ ಯಾವುದೇ ದೊಡ್ಡ ಕೆಲಸವನ್ನು ಒಂದೇ ಪ್ರಯತ್ನದಲ್ಲಿ ಮಾಡಲಾಗಿಲ್ಲ' ಎಂದರು.

            ಚಂದ್ರಯಾನ-2ರ ವೈಫಲ್ಯ ಮತ್ತು ಚಂದ್ರಯಾನ-3ರ ಯಶಸ್ಸನ್ನು ಉಲ್ಲೇಖಿಸಿ, ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಅರ್ಹತೆಗೆ ತಕ್ಕಂತೆ ಜೀವನದಲ್ಲಿ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

           ಸ್ಟೀವ್ ಜಾಬ್ಸ್, ಬಿಲ್ ಗೇಟ್ಸ್ ಮತ್ತು ಪಾಲ್ ಅಲೆನ್ ಅವರಂತಹ ಉದ್ಯಮಿಗಳ ಉದಾಹರಿಸಿದ ಅವರು, ಶೈಕ್ಷಣಿಕ ಪದವಿ ಉತ್ತಮವಾದದ್ದು, ಆದರೆ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಉತ್ಸಾಹವು ಪದವಿಯಲ್ಲಿ ಇರುವುದಿಲ್ಲ ಎಂದರು.

              ಯೋಚನೆ, ವರ್ತನೆ ಸಣ್ಣ ಕಾಲುವೆಯಂತಿರದೆ ಸಮಾಜಕ್ಕೆ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುವ ನದಿಯಂತಾದರೆ ಅದರ ಸುತ್ತಲೂ ನಾಗರಿಕತೆ ಬೆಳೆಯಬಲ್ಲದು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries