HEALTH TIPS

ಒಂದು ದೇಶ, ಒಂದು ಚುನಾವಣೆ: ಸಮಿತಿ ಸದಸ್ಯರ ನೇಮಕವಾದ ಬೆನ್ನಲ್ಲೇ ವಿಘ್ನ?

              ವದೆಹಲಿ: ದೇಶದಲ್ಲಿ ಲೋಕಸಭೆ-ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಲುವಾಗಿ ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆಗೆ ಆರಂಭದಲ್ಲಿ ವಿಘ್ನ ಎಂಬಂಥ ಪರಿಸ್ಥಿತಿ ಎದುರಾಗಿದೆ.

              ಒಂದು ದೇಶ, ಒಂದು ಚುನಾವಣೆ ವಿಚಾರವಾಗಿ ಸಾಧಕ-ಬಾಧಕಗಳನ್ನು ಅರಿಯಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿ, ನಿನ್ನೆ ಅದಕ್ಕೆ 7 ಸದಸ್ಯರನ್ನೂ ಆಯ್ಕೆ ಮಾಡಿತ್ತು.

ಆದರೆ ಆ ಸಮಿತಿ ಸದಸ್ಯರಲ್ಲಿ ಒಬ್ಬರಾಗಿರುವ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸದಸ್ಯರಾಗಲು ನಿರಾಕರಿಸಿದ್ದಾರೆ.

               ಅಧೀರ್ ರಂಜನ್ ಒಂದು ದೇಶ ಒಂದು ಚುನಾವಣೆ ಕುರಿತ ಸಮಿತಿಯನ್ನು ಸೇರುತ್ತಿಲ್ಲ ಎಂದು ಕಾಂಗ್ರೆಸ್​ ಸಂಸದ ಕೆ.ಸಿ.ವೇಣುಗೋಪಾಲ ಖಚಿತಪಡಿಸಿದ್ದಾರೆ. ಭಾರತ ಸರ್ಕಾರ ಅದಾನಿ ವಿಷಯವನ್ನು ಬೇರೆಡೆಗೆ ತಿರುಗಿಸಲು ಬಯಸಿದ್ದು, ಅದಕ್ಕಾಗಿಯೇ ಅವರು ಈ ಎಲ್ಲ ಕೆಲಸಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ಈ ಕೆಲಸಗಳನ್ನು ಮಾಡುವಾಗ ಅವರು ಸಂಸದೀಯ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಸಂಪೂರ್ಣವಾಗಿ ಹಾಳುಮಾಡುತ್ತಿದ್ದಾರೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

               ದೇಶದ ಅತಿದೊಡ್ಡ ವಿರೋಧ ಪಕ್ಷದಿಂದ ಒಬ್ಬ ಸದಸ್ಯನನ್ನಷ್ಟೇ ಸಮಿತಿಗೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಚಿದಂಬರಂ ನಿನ್ನೆ ಅಸಮಾಧಾನ ವ್ಯಕ್ತಪಡಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries