HEALTH TIPS

ಸನಾತನ ಧರ್ಮದ ಅವಹೇಳನಕ್ಕೆ ಕೊಂಡೆವೂರು ಶ್ರೀ ಖಂಡನೆ

                 ಉಪ್ಪಳ: ಸನಾತನ ಧರ್ಮವು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ, ಅದನ್ನು ತೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ರ ಈ ಹೇಳಿಕೆಯನ್ನು ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಬಲವಾಗಿ ಖಂಡಿಸಿದ್ದಾರೆ. 

           ಜಗತ್ತಿನಾದ್ಯಂತ ಇಂದು ಸನಾತನ ಧರ್ಮದ ಸಾರವನ್ನು ಎತ್ತಿ ಹಿಡಿಯುತ್ತಿರುವ ಈ ಸಂದರ್ಭದಲ್ಲಿ , ಈ ಪವಿತ್ರ ಸನಾತನ ಭೂಮಿಯಲ್ಲಿ ಜನಿಸಿದ, ಒಬ್ಬ ಸಚಿವನಾಗಿ ಈ ರೀತಿ ಸನಾತನ ಧರ್ಮದ ಅವಹೇಳನದ ಹೇಳಿಕೆ ನೀಡಿರುವುದು ಖಂಡನೀಯ ಮಾತ್ರವಲ್ಲ, ಸಚಿವರು ಹೇಳಿಕೆಯನ್ನು ತಕ್ಷಣ ಹಿಂಪಡೆದು ಸನಾತನ ಧರ್ಮ ಬಾಂಧವರ ಕ್ಷಮೆ ಕೋರಬೇಕೆಂದು ಶ್ರೀಗಳು ಆಗ್ರಹಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries