HEALTH TIPS

ಆಂಧ್ರ ಪ್ರದೇಶ ರೈಲು ಅಪ‍ಘಾತ: 12 ರೈಲುಗಳ ಸಂಚಾರ ರದ್ದು

             ಮರಾವತಿ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿದೆ. 50ಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ.

              ರಕ್ಷಣಾ ಕಾರ್ಯ ಮುಂದಿವರಿದ ಕಾರಣ 12 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ, 15 ಮಾರ್ಗಗಳನ್ನು ಬದಲಾಯಿಸಲಾಗಿದೆ ಮತ್ತು 7 ಇತರ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


               ಪ್ರಯಾಣಿಕರು ಆ ಪ್ರದೇಶದಲ್ಲಿ ಸಿಕ್ಕಿಹಾಕಿಕೊಳ್ಳದಂತೆ ಬಸ್ ವ್ಯವಸ್ಥೆಯನ್ನು ಮಾಡಿದ್ದೇವೆ. ಹಳಿಗಳನ್ನು ಭಾಗಶಃ ಸರಿಪಡಿಸಲಾಗಿದೆ. ಘಟನೆಯ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

              ತಾಂತ್ರಿಕ ಕಾರಣದಿಂದಾಗಿ ನಿಲುಗಡೆಗೊಂಡಿದ್ದ ವಿಶಾಖಪಟ್ಟಣ-ರಾಯಗಢ ಪ್ರಯಾಣಿಕರ ರೈಲಿಗೆ ವಿಶಾಖಪಟ್ಟಣ-ಪಲಾಸ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಯಗಢ ರೈಲಿನ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಈಸ್ಟ್‌ ಕೋಸ್ಟ್‌ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries