HEALTH TIPS

ಜಿ20 ಸ್ಪೀಕರ್‌ಗಳ ಶೃಂಗ: ಕೆನಡಾ ಸ್ಪೀಕರ್‌ ಹಾಜರಾಗದಿರಲು ನಿರ್ಧಾರ

                ವದೆಹಲಿ (PTI): ಜಿ20 ರಾಷ್ಟ್ರಗಳ ಸಂಸತ್‌ ಸ್ಪೀಕರ್‌ಗಳ ಶೃಂಗಸಭೆ ಗುರುವಾರ ಆರಂಭವಾಗಿದ್ದು, ಕೆನಡಾ ಸೆನೆಟ್‌ನ ಸ್ಪೀಕರ್ ರೇಮಂಡೆ ಗಗ್ನೆ ಅವರು ಹಾಜರಾಗದಿರಲು ನಿರ್ಧರಿಸಿದ್ದಾರೆ.

               ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸ್ಪೀಕರ್‌ಗಳ ಶೃಂಗದಲ್ಲಿ ತಮ್ಮ ಪಾಲ್ಗೊಳ್ಳುವಿಕೆಯನ್ನು ಅವರು ಈ ಹಿಂದೆ ಖಚಿತಪಡಿಸಿದ್ದರು.

              'ಕೆನಡಾ ಸ್ಪೀಕರ್‌ ಶೃಂಗಕ್ಕೆ ಹಾಜರಾಗುತ್ತಿಲ್ಲ. ವೇಳಾಪಟ್ಟಿಯಲ್ಲಿ ಬದಲಾವಣೆಗಳು ಆಗುತ್ತಿರುತ್ತವೆ' ಎಂದು ಅವರು ಸಂಸತ್ತಿನ ಮೂಲಗಳು ತಿಳಿಸಿವೆ.

              ರೇಮಂಡೆ ಗಗ್ನೆ ಅವರೊಂದಿಗೆ ನಡೆದ ಅನೌಪಚಾರಿಕ ಮಾತುಕತೆ ವೇಳೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ ಎಂದು ಓಂ ಬಿರ್ಲಾ ಮಾಹಿತಿ ನೀಡಿದ್ದಾರೆ.

                ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್‌ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಪ್ರಧಾನಿ ಜಸ್ಟಿನ್ ಟ್ರೂಡೊ ಆರೋಪಿಸಿದ್ದರು. ಈ ಆರೋಪಗಳನ್ನು ಭಾರತ ತಳ್ಳಿಹಾಕಿತ್ತು. ನಂತರ, ಎರಡು ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಆರಂಭವಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries