ತಿರುವನಂತಪುರಂ: ರಾಜ್ಯದಲ್ಲಿ ಡೆಂಗ್ಯೂ ಜ್ವರ ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದೆ.
ಕಳೆದ 10 ತಿಂಗಳಲ್ಲಿ 11,804 ಮಂದಿಗೆ ಡೆಂಗ್ಯೂ ಪತ್ತೆಯಾಗಿದೆ. ಈ ವರ್ಷ 41 ಮಂದಿ ಮೃತಪಟ್ಟಿರುವುದು ವರದಿಯಾಗಿವೆ. ಒಟ್ಟು 32,453 ಮಂದಿ ಡೆಂಗ್ಯೂ ಲಕ್ಷಣಗಳೊಂದಿಗೆ ಚಿಕಿತ್ಸೆ ಪಡೆದಿದ್ದಾರೆ.
ರಾಜ್ಯದಲ್ಲಿ ಕಳೆದ ಹತ್ತು ತಿಂಗಳಲ್ಲಿ 105 ಮಂದಿ ಡೆಂಗ್ಯೂ ಲಕ್ಷಣಗಳೊಂದಿಗೆ ಸಾವನ್ನಪ್ಪಿದ್ದಾರೆ. ಬಹುತೇಕರಿಗೆ ಮನೆಯಲ್ಲಿ ಡೆಂಗ್ಯೂ ದೃಢಪಟ್ಟಿದೆ. ಮೃತರಲ್ಲಿ ಡೆಂಗ್ಯೂ ದೃಢಪಟ್ಟಿಲ್ಲ ಎಂಬ ತಾಂತ್ರಿಕ ಕಾರಣದಿಂದ ಈ ಸಾವುಗಳನ್ನು ಶಂಕಿತ ಎಂದು ಪಟ್ಟಿ ಮಾಡಲಾಗಿದೆ. ಕೇರಳ ಡೆಂಗ್ಯೂ ಪ್ರಕರಣಗಳಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಕೇರಳದ ನಂತರದ ಸ್ಥಾನದಲ್ಲಿದೆ. .
ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಶೇ.56 ರಷ್ಟು ಡೆಂಗ್ಯೂ ಪ್ರಕರಣಗಳು ಈ ವರ್ಷ ದಾಖಲಾಗಿವೆ. ಕಳೆದ ವರ್ಷ ಕೇವಲ 4,468 ಪ್ರಕರಣಗಳಿದ್ದವು. 58 ಸಾವುಗಳು ಸಂಭವಿಸಿವೆ. ರೋಗ ಹರಡುವುದನ್ನು ತಡೆಯಲು ಸ್ಥಳೀಯಾಡಳಿತ ಇಲಾಖೆ ಸಹಭಾಗಿತ್ವದಲ್ಲಿ ಸೊಳ್ಳೆ ನಿರ್ಮೂಲನೆಗೆ ಯೋಜನೆ ರೂಪಿಸಿದ್ದರೂ ಹಲವೆಡೆ ಗಣನೀಯವಾಗಿ ಅನುಷ್ಠಾನಗೊಂಡಿಲ್ಲ ಎಂಬುದಕ್ಕೆ ಪ್ರಕರಣಗಳು ಹೆಚ್ಚುತ್ತಿರುವುದೇ ಸಾಕ್ಷಿ. ಮಳೆ ಮುಂದುವರಿದರೆ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.