HEALTH TIPS

ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

              ವದೆಹಲಿ : ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರದಿಂದ ಎದುರಾಗುವ ಕಾನೂನು ಮತ್ತು ನೈತಿಕ ಸಮಸ್ಯೆಗಳನ್ನು ಉಲ್ಲೇಖಿಸಿ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ಇತರರಿಗೆ ನಿರ್ದೇಶನ ನೀಡಿದೆ.

              ದೆಹಲಿಯ ಕೆಲವರು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠವು ಕೇಂದ್ರ ಸರ್ಕಾರ, ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಹಾಗೂ ಇತರರಿಗೆ ನೋಟಿಸ್‌ ಜಾರಿ ಮಾಡಿದೆ.

             ಶಸ್ತ್ರಚಿಕಿತ್ಸೆಯ ನೇರ ಪ್ರಸಾರವನ್ನು ನಿಯಮಿತವಾಗಿ ಮೇಲ್ವಿಚಾರಣೆ ನಡೆಸಲು ಸಮಿತಿಯನ್ನು ರಚಿಸಲು ಹಾಗೂ ಮಾರ್ಗಸೂಚಿಗಳನ್ನು ರೂಪಿಸಲು ಎನ್‌ಎಂಸಿಗೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿರುವುದಾಗಿ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನೂ ಒಳಗೊಂಡಿರುವ ನ್ಯಾಯಪೀಠ ಹೇಳಿದೆ.

               ಈ ಕುರಿತು ಮೂರು ವಾರಗಳ ಬಳಿಕ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries