HEALTH TIPS

ಬಳಕೆದಾರರನ್ನು ಕುತೂಹಲಗೊಳಿಸಿದ ಬಜರ್ ಧ್ವನಿ: ಭಯಕ್ಕೆ ಕಾರಣ ಬೇಡ: ಪ್ರಾಯೋಗಿಕ ವ್ಯವಸ್ಥೆ

                  

                ಬಳಕೆದಾರರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಾದರಿ ಪರೀಕ್ಷಾ ಸಂದೇಶವನ್ನು ಸ್ವೀಕರಿಸಿದ್ದಾರೆ. ಐಪೋನ್ ಬಳಕೆದಾರರು 11:30 ರ ಸುಮಾರಿಗೆ ಧ್ವನಿ ಸಂದೇಶವನ್ನು ಸ್ವೀಕರಿಸಿದ್ದಾರೆ. ಭೂಕಂಪ, ಸುನಾಮಿ ಮತ್ತು ಪ್ರವಾಹದಂತಹ ನೈಸರ್ಗಿಕ ವಿಕೋಪಗಳ ಬಗ್ಗೆ ಎಚ್ಚರಿಕೆ ನೀಡಲು ಕೇಂದ್ರ ಸರ್ಕಾರ ಈ ವ್ಯವಸ್ಥೆಯನ್ನು ಪರಿಚಯಿಸಿದೆ. ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಬರುವ ತಿಂಗಳುಗಳಲ್ಲಿ ವ್ಯವಸ್ಥೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಇದರೊಂದಿಗೆ ದೇಶದ ಜನತೆಗೆ ಪ್ರಕೃತಿ ವಿಕೋಪದ ಕುರಿತು ದೂರವಾಣಿ ಮೂಲಕ ಮಾಹಿತಿ ನೀಡಲಾಗಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಈ ಹಿಂದೆ ಕೇಂದ್ರ ಸರ್ಕಾರವು ಆ್ಯಂಡ್ರಾಯ್ಡ್ ಪೋನ್‍ಗಳಲ್ಲಿಯೂ ಇಂತಹ ಎಚ್ಚರಿಕೆ ವ್ಯವಸ್ಥೆಯನ್ನು ಪ್ರಯೋಗಿಸಿತ್ತು.


           ದೇಶದ ಜನರ ಸುರಕ್ಷತೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ ದೇಶವ್ಯಾಪಿ ತುರ್ತು ಸಂದರ್ಭದಲ್ಲಿ ಎಚ್ಚರಿಕೆಯ ಸಂದೇಶ ನೀಡುವ ಪ್ರಯೋಗ ನಡೆಸಿರುವುದಾಗಿ ಇಲಾಖೆ ಹೇಳಿದೆ. ಇಂಥ ಪ್ರಯೋಗಗಳನ್ನು ಹಲವು ಪ್ರದೇಶಗಳಲ್ಲಿ ಹಾಗೂ ಬೇರೆ ಬೇರೆ ಸಮಯಗಳಲ್ಲಿ ನಡೆಸಲಾಗುವುದು. ಆ ಮೂಲಕ ಸಂದೇಶ ಕಳುಹಿಸುವ ವ್ಯವಸ್ಥೆ ಮತ್ತು ಅದರ ಪರಿಣಾಮಗಳ ಕುರಿತು ಪರೀಕ್ಷೆಗಳನ್ನು ನಡೆಸಲಾಗುವುದು ಎಂದಿದೆ.

               ಪ್ಯಾನ್‌ ಇಂಡಿಯಾ ತುರ್ತು ಎಚ್ಚರಿಕೆ ಸಂದೇಶ ಅಕ್ಷರ ರೂಪದಲ್ಲಿ ಹಾಗೂ ಧ್ವನಿ ರೂಪದಲ್ಲೂ ಪ್ರಸಾರವಾಯಿತು. ಭೂಕಂಪ, ಪ್ರವಾಹದಂತ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಈ ಮಾದರಿಯ ಸಂದೇಶವನ್ನು ಏಕಕಾಲಕ್ಕೆ ದೇಶವ್ಯಾಪಿ ಮೊಬೈಲ್ ಬಳಕೆದಾರರಿಗೆ ಕಳುಹಿಸುವ ವ್ಯವಸ್ಥೆ ಇದಾಗಿದೆ ಎಂದು ಇಲಾಖೆ ತಿಳಿಸಿದೆ.

                      ದೊಡ್ಡ ಬೀಪ್ ಶಬ್ದದೊಂದಿಗೆ ಬಂದ ಸಂದೇಶದ ಕುರಿತು ಹಲವರು ಆತಂಕ ವ್ಯಕ್ತಪಡಿಸಿ, ಪಕ್ಕದವರಿಗೆ, ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries