ಉತ್ತರಾಖಂಡ: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಉತ್ತರಾಖಂಡಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪಿಥೋರಗಢದ ಪಾರ್ವತಿ ಕುಂಡ್ಗೆ ಭೇಟಿ ನೀಡಿ ಆದಿ ಕೈಲಾಸ್ ತುದಿಯಲ್ಲಿ ಶಿವನಿಗೆ ಪೂಜೆ ಸಲ್ಲಿಸಿದ್ದಾರೆ.
0
samarasasudhi
ಅಕ್ಟೋಬರ್ 12, 2023
ಉತ್ತರಾಖಂಡ: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಉತ್ತರಾಖಂಡಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪಿಥೋರಗಢದ ಪಾರ್ವತಿ ಕುಂಡ್ಗೆ ಭೇಟಿ ನೀಡಿ ಆದಿ ಕೈಲಾಸ್ ತುದಿಯಲ್ಲಿ ಶಿವನಿಗೆ ಪೂಜೆ ಸಲ್ಲಿಸಿದ್ದಾರೆ.
ಅಲ್ಲಿಂದ, ಗಡಿಭಾಗದಲ್ಲಿರುವ ಜುಂಜಿ ಎನ್ನುವ ಗ್ರಾಮ ತೆರಳಿ ಸ್ಥಳೀಯ ಜನರು ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ್ದಾರೆ. ಜತೆಗೆ ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮಳಿಗೆಗೆ ತೆರಳಿ ವೀಕ್ಷಣೆ ಮಾಡಿದ್ದಾರೆ. ಪ್ರಧಾನಿ ಮೋದಿಯವರೊಂದಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ತೆರಳಿದ್ದರು.
ಪಿಥೋರಗಢದಲ್ಲಿ ಪ್ರಧಾನಿ ಅವರು ₹4,200 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.