ನವದೆಹಲಿ: ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್ನ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿರುವುದಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಆಘಾತ ವ್ಯಕ್ತಪಡಿಸಿದ್ದಾರೆ.
0
samarasasudhi
ಅಕ್ಟೋಬರ್ 27, 2023
ನವದೆಹಲಿ: ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್ನ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿರುವುದಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಆಘಾತ ವ್ಯಕ್ತಪಡಿಸಿದ್ದಾರೆ.
'ಶಿಕ್ಷೆಗೆ ಗುರಿಯಾಗಿರುವವರ ಮನವಿಯನ್ನು ಪರಿಗಣಿಸಿ, ಅವರನ್ನು ದೇಶಕ್ಕೆ ವಾಪಸ್ ಕರೆತರಲು ವಿದೇಶಾಂಗ ಸಚಿವಾಲಯ ಮತ್ತು ಪ್ರಧಾನಮಂತ್ರಿ ಕಚೇರಿಯು ಕತಾರ್ನ ಉನ್ನತಾಧಿಕಾರಿಗಳೊಂದಿಗೆ ತಕ್ಷಣವೇ ಕಾರ್ಯಪ್ರವೃತ್ತವಾಗಲಿದೆ ಎಂಬ ವಿಶ್ವಾಸವಿದೆ' ಎಂದು ಹೇಳಿದ್ದಾರೆ.
ಶಿಕ್ಷೆಗೆ ಗುರಿಯಾಗಿರುವ ಎಂಟೂ ಮಂದಿ ಅಲ್ ದಹ್ರಾ ಕಂಪನಿಯ ನೌಕರರಾಗಿದ್ದರು. ಕಳೆದ ವರ್ಷದ ಆಗಸ್ಟ್ನಲ್ಲಿ ಇವರನ್ನು ಶಂಕಿತ ಬೇಹುಗಾರಿಕೆ ಆರೋಪದ ಅಡಿಯಲ್ಲಿ ವಶಕ್ಕೆ ಪಡೆಯಲಾಗಿತ್ತು. ಆದರೆ ಇವರ ಮೇಲಿನ ಆರೋಪಗಳು ಏನಿದ್ದವು ಎಂಬುದನ್ನು ಕತಾರ್ ಬಹಿರಂಗಪಡಿಸಿಲ್ಲ. ಈ ಪ್ರಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಎಲ್ಲ ಬಗೆಯ ಕಾನೂನು ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.