HEALTH TIPS

ಮಣಿಪುರ ಬಂದ್‌: ವ್ಯಾಪಾರ -ವಹಿವಾಟು ಸ್ಥಗಿತ, ಜನಜೀವನ ಅಸ್ತವ್ಯಸ್ತ

              ಇಂಫಾಲ್: ಮಣಿಪುರವನ್ನು ಭಾರತದೊಂದಿಗೆ ವಿಲೀನಗೊಳಿಸಿದ್ದರ ವಿರುದ್ಧ ಹಲವು ಉಗ್ರ ಸಂಘಟನೆಗಳು ಭಾನುವಾರ ಬಂದ್‌ಗೆ ಕರೆ ನೀಡಿದ್ದು, ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.

               ವಾಣಿಜ್ಯ ಮಳಿಗೆಗಳು ಮತ್ತು ಮಾರುಕಟ್ಟೆಗಳನ್ನು ಮುಚ್ಚಲಾಗಿತ್ತು. ಕೆಲ ಖಾಸಗಿ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

             ಅಂತರ ಜಿಲ್ಲಾ ಸಾರಿಗೆ ಸೇವೆಯನ್ನೂ ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುನೈಟೆಡ್‌ ನ್ಯಾಷನಲ್ ಲಿಬರೇಷನ್‌ ಫ್ರಂಟ್‌ (ಯುಎನ್‌ಎಲ್‌ಎಫ್‌) ಸೇರಿದಂತೆ ಕನಿಷ್ಠ ಐದು ನಿಷೇಧಿತ ಸಂಘಟನೆಗಳ ಸಮನ್ವಯ ಸಮಿತಿಯು ಬಂದ್‌ಗೆ ಕರೆ ನೀಡಿತ್ತು.

                 ಸಮಿತಿಯು, 'ಜನರು ಭಾನುವಾರ ಯಾವುದೇ ಸಂಭ್ರಮಾಚರಣೆ ನಡೆಸಬಾರದು' ಎಂದು ಮನವಿ ಮಾಡಿ ಹೇಳಿಕೆ ಬಿಡುಗಡೆ ಮಾಡಿದೆ.

                 ಮಹಾರಾಜ ಬುಧಚಂದ್ರ ಅವರು 1949 ಸೆಪ್ಟೆಂಬರ್‌ 21ರಂದು ಮಣಿಪುರವನ್ನು ಭಾರತದೊಂದಿಗೆ ವಿಲೀನ ಮಾಡುವ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅದೇ ವರ್ಷ ಅಕ್ಟೋಬರ್‌ 15ರಿಂದ ಒಪ್ಪಂದ ಅನುಷ್ಠಾನಗೊಂಡಿತ್ತು. ಉಗ್ರ ಸಂಘಟನೆಗಳು ಈ ದಿನವನ್ನು 'ಕರಾಳ ದಿನ'ವಾಗಿ ಆಚರಿಸುತ್ತಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries