HEALTH TIPS

'ವಾಸ್ತವ ಗಡಿ ಸ್ಥಿತಿ : ನಿರಂತರ ನಿಗಾ: ವಾಯುಪಡೆ ಮುಖ್ಯಸ್ಥ ವಿ.ಆರ್. ಚೌಧರಿ

                 ವದೆಹಲಿ: ವಿಶೇಷವಾಗಿ ಪೂರ್ವ ಲಡಾಖ್‌ ಸೇರಿದಂತೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ)ಯಲ್ಲಿನ ಪರಿಸ್ಥಿತಿ ಮೇಲೆ ನಿರಂತರವಾಗಿ ನಿಗಾ ವಹಿಸಲಾಗಿದೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಹೇಳಿದ್ದಾರೆ.

              ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮುಂದಿನ ಏಳೆಂಟು ವರ್ಷಗಳಲ್ಲಿ ₹2.5 ಲಕ್ಷದಿಂದ ₹3 ಲಕ್ಷ ಕೋಟಿ ಮೌಲ್ಯದ ಯುದ್ಧ ಸಲಕರಣೆಗಳು, ಶಸ್ತ್ರಾಸ್ತ್ರಗಳನ್ನು ಖರೀದಿಸಲು ಭಾರತೀಯ ವಾಯುಪಡೆ ಚಿಂತನೆ ನಡೆಸಿದೆ.

                 ಜತೆಗೆ ಹೆಚ್ಚುವರಿಯಾಗಿ 97 ಲಘು ಯುದ್ಧ ವಿಮಾನ ತೇಜಸ್ ಮಾರ್ಕ್ 1-ಎ ಅನ್ನು ಖರೀದಿಸಲು ಯೋಜಿಸುತ್ತಿದೆ' ಎಂದು ಹೇಳಿದರು.

                ರಷ್ಯಾದಿಂದ ಮೂರು ಎಸ್-400 ಕ್ಷಿಪಣಿ ವ್ಯವಸ್ಥೆಗಳು ಭಾರತದ ವಾಯುಪಡೆಗೆ ಸೇರ್ಪಡೆಯಾಗಿದ್ದು, ಉಳಿದ ಎರಡು ಕ್ಷಿಪಣಿಗಳು ಮುಂದಿನ ವರ್ಷದೊಳಗೆ ಬರುವ ಸಾಧ್ಯತೆಯಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

                 ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries