HEALTH TIPS

ಗುಜರಾತ್‌ನಲ್ಲಿ ಭಾರಿ ಮಳೆ: ಸಿಡಲು ಬಡಿದು 20 ಮಂದಿ ಸಾವು

               ಹಮದಾಬಾದ್: ಗುಜರಾತ್‌ನ ವಿವಿಧಡೆ ಭಾನುವಾರ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು 20 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

               ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಗುಜರಾತಿನ ವಿವಿಧಡೆ ಸಿಡಿಲು ಬಡಿದು ಮೃತಪಟ್ಟಿರುವವರಿಗೆ ಸಂತಾಪ ಸೂಚಿಸಿದ್ದಾರೆ.


               ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸುತ್ತೇನೆ. ಸ್ಥಳೀಯ ಅಧಿಕಾರಿಗಳು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

                ರಾಜ್ಯದ ಸೂರತ್, ಸುರೇಂದ್ರನಗರ, ಖೇಡಾ, ತಾಪಿ, ಭರೂಚ್ ಮತ್ತು ಅಮ್ರೇಲಿ ಜಿಲ್ಲೆಗಳಲ್ಲಿ ಕೇವಲ 16 ಗಂಟೆಗಳಲ್ಲಿ 50 ರಿಂದ117 ಮಿಮೀ ಮಳೆ ದಾಖಲಾಗಿದೆ.

                  ಅಹಮದಾಬಾದ್‌ನ ಭಾರತೀಯ ಹವಾಮಾನ ಇಲಾಖೆಯ (ಎಎಂಡಿ) ನಿರ್ದೇಶಕಿ ಮನೋರಮಾ ಮೊಹಂತಿ ಅವರು ಇಂದು( ಸೋಮವಾರ) ಮಳೆ ಕಡಿಮೆಯಾಗಲಿದೆ. ಗುಜರಾತ್‌ನ ದಕ್ಷಿಣ, ಸೌರಾಷ್ಟ್ರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಈಶಾನ್ಯ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ರೂಪುಗೊಂಡಿರುವುದೇ ಅಕಾಲಿಕ ಮಳೆಗೆ ಕಾರಣವಾಗಿದೆ ಎಂದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries