ಗುವಾಹಟಿ: ಶಸ್ತ್ರಸಜ್ಜಿತ ಕುಕಿ ಸಮುದಾಯಕ್ಕೆ ಸೇರಿದ ಕಿಡಿಗೇಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಣಿಪುರಕ್ಕೆ ಹೊಂದಿಕೊಂಡಿರುವ ಮ್ಯಾನ್ಮಾರ್ ಗಡಿ ಪ್ರದೇಶದಲ್ಲಿರುವ ಮೋರೆ ಪಟ್ಟಣದ ವಿಭಾಗೀಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
ಗುವಾಹಟಿ: ಶಸ್ತ್ರಸಜ್ಜಿತ ಕುಕಿ ಸಮುದಾಯಕ್ಕೆ ಸೇರಿದ ಕಿಡಿಗೇಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಣಿಪುರಕ್ಕೆ ಹೊಂದಿಕೊಂಡಿರುವ ಮ್ಯಾನ್ಮಾರ್ ಗಡಿ ಪ್ರದೇಶದಲ್ಲಿರುವ ಮೋರೆ ಪಟ್ಟಣದ ವಿಭಾಗೀಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
ಮೈತೇಯಿ ಸಮುದಾಯಕ್ಕೆ ಸೇರಿದ ಚಿಂಗ್ತಮ್ ಆನಂದ್ ಕುಮಾರ್ ಮೃತಪಟ್ಟವರು.
ಘಟನೆಯ ಸುದ್ದಿ ತಿಳಿದು ಇಂಫಾಲ್ನಿಂದ ಮೋರೆಗೆ ತೆರಳುತ್ತಿದ್ದ ಪೊಲೀಸರ ತಂಡದ ಮೇಲೂ ಶಸ್ತ್ರಸಜ್ಜಿತ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಮೋರೆಯಲ್ಲಿ ಹೊಸದಾಗಿ ನಿರ್ಮಿಸಿದ್ದ ಹೆಲಿಪ್ಯಾಡ್ ಪರಿಶೀಲಿಸಲು ಆನಂದ್ ನೇತೃತ್ವದಡಿ ತೆರಳಿದ್ದ ಪೊಲೀಸ್ ತಂಡದ ಮೇಲೆ ಕಿಡಿಗೇಡಿಗಳು ಮರೆಯಲ್ಲಿ ನಿಂತು ಗುಂಡಿನ ದಾಳಿ ನಡೆಸಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.