HEALTH TIPS

ನ್ಯಾಯಮೂರ್ತಿಗಳ ನೇಮಕ | ಸಮಸ್ಯೆ ಸೃಷ್ಟಿಸುತ್ತಿರುವ ಕೇಂದ್ರದ ನಡೆ: ಕೋರ್ಟ್ ಕಳವಳ

                ವದೆಹಲಿ: ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಕೊಲಿಜಿಯಂ ಕಳುಹಿಸಿದ ಹೆಸರುಗಳ ಪೈಕಿ ಆಯ್ದ ಕೆಲವಕ್ಕೆ ಮಾತ್ರ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವುದು ಸಮಸ್ಯೆ ಸೃಷ್ಟಿಸುವಂಥದ್ದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಕಳವಳ ವ್ಯಕ್ತಪಡಿಸಿದೆ.

                ಒಂದು ಹೈಕೋರ್ಟ್‌ನಿಂದ ಇನ್ನೊಂದು ಹೈಕೋರ್ಟ್‌ಗೆ ವರ್ಗಾವಣೆಗೆ ಶಿಫಾರಸು ಮಾಡಿದ್ದ ನ್ಯಾಯಮೂರ್ತಿಗಳ ಹೆಸರುಗಳು ಕೇಂದ್ರದ ಬಳಿ ಹಾಗೆಯೇ ಉಳಿದಿವೆ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರು ಇದ್ದ ನ್ಯಾಯಪೀಠವು ಹೇಳಿದೆ.

                  'ಸರ್ಕಾರಕ್ಕೆ ರುಚಿಸದ ರೀತಿಯಲ್ಲಿ ಈ ನ್ಯಾಯಾಲಯ ಅಥವಾ ಕೊಲಿಜಿಯಂ ತೀರ್ಮಾನ ತೆಗೆದುಕೊಳ್ಳಬೇಕಾಗುವ ಸಂದರ್ಭವು ಸೃಷ್ಟಿ ಆಗುವುದಿಲ್ಲ ಎಂಬುದು ನಮ್ಮ ಆಶಯ' ಎಂದು ಕೂಡ ಪೀಠವು ಹೇಳಿದೆ. ನ್ಯಾಯಮೂರ್ತಿಗಳ ನೇಮಕ ಹಾಗೂ ವರ್ಗಾವಣೆಗೆ ಸಂಬಂಧಿಸಿದ ಶಿಫಾರಸುಗಳ ವಿಚಾರದಲ್ಲಿ ಕೇಂದ್ರವು ತ್ವರಿತವಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸುತ್ತಿದೆ.

                    ಕೆಲವು ಹೆಸರುಗಳಿಗೆ ಸಂಬಂಧಿಸಿದಂತೆ ಪ್ರಕ್ರಿಯೆಗಳು ತ್ವರಿತವಾಗಿ ನಡೆಯುತ್ತಿವೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು. ಆದರೆ ಕೆಲವರ ವಿಚಾರದಲ್ಲಿ ಮಾತ್ರ ತ್ವರಿತವಾಗಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಸಮಸ್ಯೆಗಳನ್ನು ಸೃಷ್ಟಿಸಿದೆ. ಇಂತಹ ಕೆಲಸ ಮಾಡಬಾರದು ಎಂದು ಕೌಲ್ ಅವರು ಕಿವಿಮಾತು ಹೇಳಿದರು.

                 ಯಾವ ನ್ಯಾಯಮೂರ್ತಿ ಯಾವ ಹೈಕೋರ್ಟ್‌ನಲ್ಲಿ ಕೆಲಸ ಮಾಡಬೇಕು ಎಂಬುದನ್ನು ನ್ಯಾಯಾಂಗವೇ ತೀರ್ಮಾನಿಸಬೇಕು ಎಂದು ಕೂಡ ಪೀಠವು ಅಭಿಪ್ರಾಯ ವ್ಯಕ್ತಪಡಿಸಿದೆ. ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries