HEALTH TIPS

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಬಿಜೆಪಿ ನಾಯಕನಿಗೆ ಒಲಿಯಿತು ಪ್ರಮುಖ ಹುದ್ದೆ!

                 ನವದೆಹಲಿ: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ.

                 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

               2019ರಲ್ಲಿ ಕೋಲಾರದಲ್ಲಿ ನಡೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಮೋದಿ  ಉಪನಾಮದ ಬಗ್ಗೆ ಪ್ರಸ್ತಾಪಿಸಿದ್ದ ರಾಹುಲ್​​​​ ಗಾಂಧಿ ವಿರುದ್ಧ ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​​​ ನ್ಯಾಯಾಲಯವು ಮಾರ್ಚ್‌ನಲ್ಲಿ ರಾಹುಲ್​​​ ಗಾಂಧಿ ಅವರು ದೋಷಿ ಎಂದು ಹೇಳಿ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿತ್ತು.

                  ನಂತರ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ರಾಹುಲ್​​​ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ಈ ವಿಚಾರವಾಗಿ ರಾಹುಲ್​​​ ಗಾಂಧಿ ಅವರು ಸುಪ್ರೀಂ ಕೋರ್ಟ್​ಗೆ ಆಗಸ್ಟ್​​ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ಅವರ ಶಿಕ್ಷೆಯನ್ನು ತಡೆಹಿಡಿಯಿತು. ನಂತರ ಮತ್ತೆ ಲೋಕಸಭಾ ಸದಸ್ಯತ್ವವನ್ನು ಅವರಿಗೆ ನೀಡಲಾಯಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries