ಬದಿಯಡ್ಕ : ಸಹಪಠ್ಯ ಚಟುವಟಿಕೆ ಬಹುಮಾನ ವಿತರಣಾ ಕಾರ್ಯಕ್ರಮ ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ನಡೆಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.
ನಿವೃತ್ತ ವ್ಯದ್ಯಾಧಿಕಾರಿ ಡಾ.ಕೇಶವ ನಾಯ್ಕ ಸಮಾರಂಭ ಉದ್ಘಾಟಿಸಿ ಮಾತನಾಡಿ, ಓದುವಿಕೆ ಜತೆಗೆ ಕಲೆ, ಕ್ರೀಡೆ, ಸಾಹಿತ್ಯ ಹೀಗೆ ಎಲ್ಲ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಮುಮಚೂಣಿಗೆ ಬಂದಾಗ ಅವರ ಸರ್ವತೋಮುಖ ಏಳಿಗೆ ಸಾಧ್ಯವಾಗಲಿದೆ. ಶಾಲಾ ಹಂತದಲ್ಲಿ ತೋರುವ ಪ್ರತಿಭಾ ಸಾಮಥ್ರ್ಯ ತನ್ನ ಜೀವನದ ಮೈಲಿಗಲ್ಲಾಗಲು ಸಾಧ್ಯ ಎಂದು ತಿಳಿಸಿದರು. ಶಾಲಾ ಮೇಲ್ವಿಚಾರಕ ಪ್ರಶಾಂತ ಬಿಳಿಂಜೆ ªಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಮಾನಸ ಉಪಸ್ಥಿತರಿದ್ದರು. ಶಾಲೆಯಲ್ಲಿ ನಡೆದ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಲಾಯಿತು.


