HEALTH TIPS

ರಾಹುಲ್‌ ಗಾಂಧಿ ಅವರಂತೆ ಕಾಂಗ್ರೆಸ್ ನೀಡಿದ ಭರವಸೆಗಳೂ ವಿಫಲ: ಅನುರಾಗ್ ಠಾಕೂರ್

               ಭೋಪಾಲ್: ಹಿಮಾಚಲ ಪ್ರದೇಶ, ರಾಜಸ್ಥಾನ, ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳು ಪಕ್ಷದ ನಾಯಕ ರಾಹುಲ್ ಗಾಂಧಿ ಅವರಂತೆಯೇ ವೈಫಲ್ಯ ಕಂಡಿವೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ವ್ಯಂಗ್ಯವಾಡಿದ್ದಾರೆ.

               ಕಳೆದ ವಿಧಾನಸಭಾ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ.

             ಸರ್ಕಾರವು 10 ದಿನಗಳಲ್ಲಿ ₹2 ಲಕ್ಷ ವರೆಗಿನ ಕೃಷಿ ಸಾಲ ಮನ್ನಾ ಜಾರಿ ಮಾಡದಿದ್ದರೆ ಮುಖ್ಯಮಂತ್ರಿ ಬದಲಾವಣೆ, ‌ನಿರುದ್ಯೋಗ ಭತ್ಯೆಯಾಗಿ ₹4,000 ಎಂಬ ಭರವಸೆಗಳನ್ನು ರಾಹುಲ್ ನೀಡಿದ್ದರು. ಆದರೆ, ಈ ಘೋಷಣೆಗಳು 15 ತಿಂಗಳ ಆಡಳಿತದಲ್ಲಿ (2018ರ ಡಿಸೆಂಬರ್ ಮತ್ತು 2020ರ ಮಾರ್ಚ್‌ವರೆಗಿನ ಕಮಲ್ ನಾಥ್ ಅಧಿಕಾರ ಅವಧಿ) ಜಾರಿಗೆ ಬಂದಿಲ್ಲ ಎಂದು ಠಾಕೂರ್ ಆರೋಪಿಸಿದ್ದಾರೆ.

                 'ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂತಹ ಭರವಸೆಗಳು ವಿಫಲವಾಗಿವೆ. ಹಿಮಾಚಲ ಪ್ರದೇಶದಲ್ಲಿ 22.50 ಲಕ್ಷ ಮಹಿಳೆಯರಿಗೆ ತಿಂಗಳಿಗೆ ₹1,500 ಕೊಡುವ ಭರವಸೆಯನ್ನು ಪಕ್ಷ ನೀಡಿತ್ತು. ಪಕ್ಷ ಅಧಿಕಾರಕ್ಕೆ ಬಂದು 10 ತಿಂಗಳು ಕಳೆದರೂ ಅದನ್ನು ಜಾರಿಗೆ ತಂದಿಲ್ಲ. ಒಂದು ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದರು. ಆದರೆ, ಈವರೆಗೆ 1,000 ಉದ್ಯೋಗಗಳನ್ನೂ ಸೃಷ್ಟಿಸಿಲ್ಲ' ಎಂದು ಅವರು ಹೇಳಿದ್ದಾರೆ. ರಾಜಸ್ಥಾನದಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯಗಳು ನಡೆದಿವೆ ಎಂದು ಸಚಿವರು ಆರೋಪಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries