HEALTH TIPS

ಶ್ರೀನಗರ: ಗಡಿಯಲ್ಲಿ ಒಳನುಸುಳುವಿಕೆ ಯತ್ನ- ಇಬ್ಬರು ಉಗ್ರರ ಹತ್ಯೆ

              ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

              ಸೇನೆಯ ಜಾಗೃತ ದಳದ ಸಿಬ್ಬಂದಿ ಎಲ್‌ಒಸಿ ಬಳಿ ಉಗ್ರರ ಚಲನವಲನವನ್ನು ಪತ್ತೆ ಮಾಡಿತ್ತು.

                   ನುಸುಳುಕೋರರನ್ನು ಭದ್ರತಾ ಸಿಬ್ಬಂದಿ ಅಡ್ಡಗಟ್ಟಿದಾಗ ಎರಡು ಕಡೆಯಿಂದ ಭಾರಿ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ತಿಳಿಸಿದ್ದಾರೆ.

                    ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಉಗ್ರರ ಒಳನುಸುಳುವಿಕೆ ಯತ್ನ ಕಡಿಮೆಯಾಗಿದೆ. ಅಕ್ಟೋಬರ್ 26ರಂದು ಕುಪ್ವಾರ ಜಿಲ್ಲೆಯ ಮಚ್ಚಿಲ್ ಸೆಕ್ಟರ್‌ನಲ್ಲಿ ಎಲ್‌ಒಸಿ ಬಳಿ ಐವರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಅಕ್ಟೋಬರ್ 22ರಂದು ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಗಡಿ ಒಳಗೆ ನುಸುಳುವಿಕೆ ಯತ್ನ ವಿಫಲಗೊಳಿಸಿದ್ದ ಭದ್ರತಾ ಪಡೆ, ಇಬ್ಬರು ಉಗ್ರರನ್ನು ಕೊಂದಿತ್ತು.

                    ಜೂನ್‌ನಲ್ಲಿ ಒಟ್ಟು 11 ನುಸುಳುಕೋರರನ್ನು ಹೊಡೆದುರುಳಿಸಲಾಗಿತ್ತು. ಇದರಲ್ಲಿ ನಾಲ್ವರನ್ನು ಮಚ್ಚಿಲ್ ಸೆಕ್ಟರ್‌ನಲ್ಲಿ ಮತ್ತು ಐವರನ್ನು ಕೇರಾನ್ ಸೆಕ್ಟರ್‌ನ ಸಮೀಪದ ಜುಮಗುಂಡ್ ಪ್ರದೇಶದಲ್ಲಿ ಹತ್ಯೆ ಮಾಡಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries