ತಿರುವನಂತಪುರಂ: ಕಲೆಕ್ಟರ್ ಹೆಸರಿನಲ್ಲಿ ನಕಲಿ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ತಿರುವನಂತಪುರಂ ಜಿಲ್ಲಾಧಿಕಾರಿ ಜೆರೊಮಿಕ್ ಜಾರ್ಜ್ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ವಸೂಲಿ ಮಾಡಲು ಯತ್ನಿಸಿರುವುದು ಕಂಡುಬಂದಿದೆ.
ಜಿಲ್ಲಾಧಿಕಾರಿ ಚಿತ್ರ ಬಳಸಿ ನಕಲಿ ಖಾತೆ ಸೃಷ್ಟಿಸಿ ಸಂದೇಶ ರವಾನಿಸಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಇದನ್ನು ಸ್ವತಃ ಜಿಲ್ಲಾಧಿಕಾರಿ ಜೆರೊಮಿಕ್ ಜಾರ್ಜ್ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ.
'ನಾನು ಪೋನ್ ನಂಬರ್ ಕಳುಹಿಸುತ್ತಿದ್ದೇನೆ. ನೀವು ತಕ್ಷಣ 50,000 ರೂಪಾಯಿಗಳನ್ನು ವರ್ಗಾಯಿಸಬಹುದೇ? ಒಂದು ಗಂಟೆಯೊಳಗೆ ನಿಮ್ಮ ಹಣ ವಾಪಸ್ ಕೊಡಿಸುತ್ತೇನೆ’’ ಎಂಬುದು ಜಿಲ್ಲಾಧಿಕಾರಿಗಳ ನಕಲಿ ಖಾತೆಗಳ ಮೂಲಕ ಬರುತ್ತಿರುವ ಸಂದೇಶ. ಅವರ ಹೆಸರಿನಲ್ಲಿರುವ ನಕಲಿ ಖಾತೆ ಗಮನಕ್ಕೆ ಬಂದಿದ್ದು, ಕೂಡಲೇ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು. ಸಂದೇಶಗಳಿಗೆ ಪ್ರತಿಕ್ರಿಯಿಸದಂತೆ ಜಿಲ್ಲಾಧಿಕಾರಿ ಸೂಚಿಸಿದರು.