HEALTH TIPS

ಸುರಂಗ ಪ್ರವೇಶಿಸಿದ NDRF ಸಿಬ್ಬಂದಿ; ಕಾರ್ಮಿಕರಿಗೆ 41 ಹಾಸಿಗೆಗಳ ಆಸ್ಪತ್ರೆ ಸಜ್ಜು

                  ತ್ತರಕಾಶಿ: 'ಇಲ್ಲಿನ ಸಿಲ್ಕ್ಯಾರಾದಲ್ಲಿ ನಿರ್ಮಿಸುತ್ತಿರುವ ಸುರಂಗ ಕುಸಿದ ಪರಿಣಾಮ ಒಳಗೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯ ಅಂತಿಮ ಹಂತ ತಲುಪಿದ್ದು, ಕೇಂದ್ರ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌) ಸಿಬ್ಬಂದಿ ಸುರಂಗದೊಳಗೆ ಪ್ರವೇಶಿಸಿದ್ದಾರೆ.

                ಸುರಂಗದ ಮತ್ತೊಂದು ಬದಿಯಿಂದ 41 ಮೀಟರ್ ರಂಧ್ರ ಕೊರೆಯಲಾಗಿದೆ. ಇನ್ನು ಕೆಲವೇ ಮೀಟರ್ ರಂಧ್ರ ಕೊರೆಯುವ ಕಾರ್ಯ ಬಾಕಿ ಇದೆ. ರಾತ್ರಿ ಹೊತ್ತಿಗೆ ಶುಭ ಸುದ್ದಿ ಸಿಗಲಿದೆ ಎಂದು ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಭಾಸ್ಕರ್ ಖುಲ್ಬೆ ಹೇಳಿದ್ದರು.


                  ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವ ಕಾರ್ಯ ಪ್ರಗತಿಯಲ್ಲಿದ್ದು, ವೈದ್ಯರ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದೆ. ಸಿಲ್ಕ್ಯಾರಾದಲ್ಲಿ 41 ಹಾಸಿಗೆಗಳ ಆಸ್ಪತ್ರೆಯನ್ನೂ ಸಜ್ಜುಗೊಳಿಸಲಾಗಿದೆ.

             ಕೇಂದ್ರ ಸರ್ಕಾರದ ಚಾರ್‌ಧಾಮ್ ಸರ್ವಋತು ರಸ್ತೆ ಯೋಜನೆಯಡಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದಲ್ಲಿ ನಿರ್ಮಿಸುತ್ತಿರುವ ಸುರಂಗದ ಕೆಲಭಾಗಗಳು ಕಳೆದ ಶನಿವಾರ (ನ.12) ಕುಸಿದು, 41 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಹೊರತರಲು ಈಗಾಗಲೇ 45 ಮೀಟರ್‌ ರಂಧ್ರ ಕೊರೆಯಲಾಗಿದೆ.

               ರಕ್ಷಣಾ ಕಾರ್ಯಾಚರಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡ, ಕಾರ್ಮಿಕರತ್ತ ಮೂರನೇ ಎರಡರಷ್ಟು ದೂರದ ಮಾರ್ಗ ಕೊರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries