HEALTH TIPS

ಕೋವಿಡ್‌: ಜೆಎನ್‌.1 ಉಪ ತಳಿಯ 63 ಪ್ರಕರಣ ದಾಖಲು

               ವದೆಹಲಿ: ಕೊರೊನಾ ವೈರಸ್‌ನ ಹೊಸ ಉಪತಳಿ ಜೆಎನ್‌.1ರ ಎಂಟು ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ದೇಶದಲ್ಲಿ ಈ ತಳಿಯ ಒಟ್ಟು 63 ಪ್ರಕರಣಗಳು ಭಾನುವಾರದವರೆಗೆ ವರದಿಯಾಗಿವೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

                 ಮಹಾರಾಷ್ಟ್ರದಲ್ಲಿ 9, ಕೇರಳದಲ್ಲಿ 6, ತಮಿಳುನಾಡಿನಲ್ಲಿ 4 ಮತ್ತು ತೆಲಂಗಾಣದಲ್ಲಿ 2 ಪ್ರಕರಣಗಳು ವರದಿಯಾಗಿವೆ.

               ಆಸ್ಪತ್ರೆಗೆ ದಾಖಲಾಗುವ ಪ್ರಮಾಣದಲ್ಲಿ ಯಾವುದೇ ಏರಿಕೆಯಾಗಿಲ್ಲ. ಇತರ ವೈದ್ಯಕೀಯ ಕಾರಣಗಳಿಗೆ ಆಸ್ಪತ್ರೆಗೆ ದಾಖಲಾದವರಲ್ಲಿ ಕೋವಿಡ್-19 ಪ್ರಾಸಂಗಿಕವಾಗಿ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

             ದೇಶದಲ್ಲಿ ಒಂದೇ ದಿನ ಕೋವಿಡ್‌ನ 628 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,054ಕ್ಕೆ ಏರಿದೆ. ಕಳೆದ 24 ತಾಸುಗಳ ಅವಧಿಯಲ್ಲಿ ಕೇರಳದಲ್ಲಿ ಕೋವಿಡ್‌ನಿಂದ ಒಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

                  ಮುಂಬೈ: ಮಹಾರಾಷ್ಟ್ರದ ಕೃಷಿ ಸಚಿವ ಧನಂಜಯ್ ಮುಂಡೆ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ತಿಳಿಸಿದ್ದಾರೆ. 'ವೈರಲ್ ಸೋಂಕಿನ ಬಗ್ಗೆ ಭಯಪಡುವ ಅಗತ್ಯವಿಲ್ಲ. ಸರ್ಕಾರ ಈ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದು ಕೋವಿಡ್‌ ತಡೆಗೆ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದು ಪವಾರ್ ಸುದ್ದಿಗಾರರಿಗೆ ತಿಳಿಸಿದರು. ಮುಂಡೆ ಅವರಿಗೆ ಕೋವಿಡ್‌ ದೃಢಪಟ್ಟಿರುವುದನ್ನು ಅವರ ಕಚೇರಿಯು ‌ಖಚಿತಪಡಿಸಿದೆ. ಆದರೆ ಅವರಿಗೆ ಕಾಣಿಸಿರುವ ಕೋವಿಡ್‌ ರೂಪಾಂತರಿ ತಳಿಯ ವಿವರ ಬಹಿರಂಗಪಡಿಸಿಲ್ಲ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries