HEALTH TIPS

ಶಬರಿಮಲೆ: ₹204 ಕೋಟಿ ಆದಾಯ ಸಂಗ್ರಹ

                ಬರಿಮಲೆ : ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಕಳೆದ 39 ದಿನಗಳಲ್ಲಿ ₹204.30 ಕೋಟಿ ಆದಾಯ ಸಂಗ್ರಹವಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಂಗಳವಾರ ಹೇಳಿದೆ.

                ಭಕ್ತರು ನಾಣ್ಯದ ರೂಪದಲ್ಲಿ ಸಲ್ಲಿಸಿರುವ ಕಾಣಿಕೆಯನ್ನು ಎಣಿಕೆ ಮಾಡಿದರೆ ಆದಾಯದ ಮೊತ್ತವು ಇನ್ನಷ್ಟು ಹೆಚ್ಚಲಿದೆ ಎಂದು ಟಿಡಿಬಿ ಅಧ್ಯಕ್ಷ ಪಿ.ಎಸ್‌. ಪ್ರಶಾಂತ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

             ಭಕ್ತರು ಸಲ್ಲಿಸಿರುವ ಕಾಣಿಕೆಯಿಂದ ₹63.89 ಕೋಟಿ ಸಂಗ್ರಹವಾಗಿದೆ. 'ಅರವಣ' ಪ್ರಸಾದ ಮಾರಾಟದಿಂದ ₹96.32 ಕೋಟಿ, 'ಅಪ್ಪಂ' ಪ್ರಸಾದ ಮಾರಾಟದಿಂದ ₹12.38 ಕೋಟಿ ಲಭಿಸಿದೆ ಎಂದಿದ್ದಾರೆ.

              ಮಂಡಲ ಋತುವಿನಲ್ಲಿ ಡಿಸೆಂಬರ್‌ 25ರವರೆಗೆ 31,43,163 ಮಂದಿ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಇದೇ ಅವಧಿಯಲ್ಲಿ 7,25,049 ಮಂದಿ ಭಕ್ತರಿಗೆ ಉಚಿತವಾಗಿ ಆಹಾರ ಪೂರೈಸಲಾಗಿದೆ ಎಂದು ಪ್ರಶಾಂತ್‌ ತಿಳಿಸಿದ್ದಾರೆ.

                   ಮಂಡಲ ‍ಪೂಜೆಯು ಇದೇ 27ರಂದು ನಡೆಯಲಿದೆ. ಮಂಡಲ ಪೂಜೆಯ ಬಳಿಕ ದೇವಾಲಯದ ಬಾಗಿಲು ಮುಚ್ಚಲಿದ್ದು, ಇದೇ 30ರಂದು ಮತ್ತೆ ತೆರೆಯಲಿದೆ ಎಂದಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries