ಶಬರಿಮಲೆ: ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಮಕರವಿಳಕ್ಕು ಉತ್ಸವಕ್ಕೆ ಶಬರಿಮಲೆ ಸಜ್ಜಾಗಿದ್ದು, ಶನಿವಾರ ಸಂಜೆ ದೇಗುಲದ ಬಾಗಿಲನ್ನು ತೆರೆಯಲಾಯಿತು.
0
samarasasudhi
ಡಿಸೆಂಬರ್ 31, 2023
ಶಬರಿಮಲೆ: ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಮಕರವಿಳಕ್ಕು ಉತ್ಸವಕ್ಕೆ ಶಬರಿಮಲೆ ಸಜ್ಜಾಗಿದ್ದು, ಶನಿವಾರ ಸಂಜೆ ದೇಗುಲದ ಬಾಗಿಲನ್ನು ತೆರೆಯಲಾಯಿತು.
ಮುಖ್ಯ ಅರ್ಚಕ ಪಿ.ಎನ್.ಮಹೇಶ್ ನಂಬೂದಿರಿ ಅವರು ತಂತ್ರಿ ಕಂಡರಾರು ಮಹೇಶ್ ಮೋಹನರಾರು ಅವರ ಉಪಸ್ಥಿತಿಯಲ್ಲಿ ದೇವಾಲಯದ ಗರ್ಭಗುಡಿಯ ಬಾಗಿಲನ್ನು ತೆರೆದರು.
ಜ.15ರಂದು ನಡೆಯುವ ಮಕರವಿಳಕ್ಕು ಅಂಗವಾಗಿ 'ಪ್ರಸಾದ ಶುದ್ಧ ಕ್ರಿಯೆ' ಮತ್ತು 'ಬಿಂಬ ಶುದ್ಧ ಕ್ರಿಯೆ' ಮೊದಲಾದ ಧಾರ್ಮಿಕ ವಿಧಿಗಳು ಜನವರಿ 13 ಮತ್ತು 14ರಂದು ನಡೆಯಲಿವೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಹೇಳಿಕೆಯಲ್ಲಿ ತಿಳಿಸಿದೆ.
ಮಕರವಿಳಕ್ಕು ದಿನದಂದು 'ತಿರುವಾಭರಣ' ಸ್ವೀಕಾರ, ದೀಪಾರಾಧನೆಗೆ ಸಾವಿರಾರು ಮಂದಿ ಭಕ್ತರು ಸಾಕ್ಷಿಯಾಗಲಿದ್ದಾರೆ ಎಂದಿದೆ.
ಮಕರವಿಳಕ್ಕು ದರ್ಶನದ ಬಳಿಕವೂ ಜನವರಿ 20ರ ವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದೂ ಹೇಳಿದೆ.