ಮುಳ್ಳೇರಿಯ: ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಆತಿಥ್ಯದಲ್ಲಿ ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ವಾರ್ಷಿಕ ಸಾಂಸ್ಕøತಿಕೋತ್ಸವವು ಮುಳ್ಳೇರಿಯದ ವಿದ್ಯಾಶ್ರೀ ಶಿಕ್ಷಣ ಕೇಂದ್ರ ಹಾಗೂ ಗಣೇಶ ಮಂದಿರದಲ್ಲಿ ಡಿ.23ರಿಂದ 2 ದಿನಗಳ ಕಾಲ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಡಿ. 23ರಂದು ಬೆಳಗ್ಗೆ 9ಕ್ಕೆ ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಅಧ್ಯಕ್ಷ ಡಾ. ರವಿಪ್ರಸಾದ್ ಧ್ವಜಾರೋಹಣ ನಿರ್ವಹಿಸುವರು. ಬಳಿಕ ನೊಂದಾವಣೆ ಹಾಗೂ ಗಾಯನ, ಗೀತಾ ಕಂಠಪಾಠ, ಭಾಷಣ, ಪುರಾಣ ರಸಪ್ರಶ್ನೆ, ಸಂಗೀತ ಕುರ್ಚಿ, ಭರತನಾಟ್ಯ, ಜಾನಪದ ನೃತ್ಯ, ರಂಗವಲ್ಲಿ ಮೊದಲಾದ ಸ್ಪರ್ಧೆಗಳು ನಡೆಯಲಿವೆ. ಶಿವಳ್ಳಿ ಬ್ರಾಹ್ಮಣ ಸಭಾದ ಮುಳ್ಳೇರಿಯ, ಕಾಂಞಂಗಾಡು, ಮಂಜೇಶ್ವರ, ಏತಡ್ಕ ಹಾಗೂ ಕಾಸರಗೋಡು ವಲಯದ ಸದಸ್ಯರು ಸ್ಪರ್ಧೆಗಳಲ್ಲಿ ಭಾಗವಹಿಸುವರು.
ಡಿ.24ರಂದು ಬೆಳಗ್ಗೆ 11ಕ್ಕೆ ಸಂಘಟನೆಯ ವಾರ್ಷಿಕ ಮಹಾಸಭೆಯು ನಡೆಯಲಿದೆ. ಅಪರಾಹ್ನ 2ರಿಂದ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು. ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಧ್ಯಕ್ಷ ಮಂಜುನಾಥ ಟಿ ಕೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ನರಿಮೊಗರಿನ ಸರಸ್ವತಿ ವಿದ್ಯಾಮಂದಿರದ ಮುಖ್ಯಸ್ಥರಾದ ಅವಿನಾಶ್ ಉಂಗ್ರುಪುಳಿತ್ತಾಯ ಕೊಡಂಕಿರಿ ಹಾಗೂ ಕೇರಳ ಉಡುಪಿ ಮಾಧ್ವ ಬ್ರಾಹ್ಮಣ ಸಭಾದ ಮಹಿಳಾ ಘಟಕದ ಕಾರ್ಯದರ್ಶಿ ರಮಾದೇವಿ ಭಾಗವಹಿಸುವರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ವೇತನ, ವೈದ್ಯಕೀಯ ಧನಸಹಾಯ, ಸಾಂಸ್ಕøತಿಕೋತ್ಸವದಲ್ಲಿ ವಿಜೇತರಾದ ಪ್ರತಿಭೆಗಳಿಗೆ ಬಹುಮಾನ ವಿತರಣೆಗಳು ನಡೆಯಲಿವೆ.
ಕಾರ್ಯಕ್ರಮದಲ್ಲಿ ಮುಳ್ಳೇರಿಯಾ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಗೌರವಾಧ್ಯಕ್ಷ ಕುಂಟಾರು ವಾಸುದೇವ ತಂತ್ರಿ, ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಕಾರ್ಯದರ್ಶಿ ಡಾ. ಬಿ ಸೀತಾರಾಮ ಕಡಮಣ್ಣಾಯ, ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಖಜಾಂಜಿ ಶ್ರೀಪ್ರಕಾಶ್ ಪಾಂಙಣ್ಣಾಯ, ಶಿವಳ್ಳಿ ಬ್ರಾಹ್ಮಣ ಸಭಾದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಸುಮನಾ ಪೊಳಿನ್ನಾಯ, ಶಿವಳ್ಳಿ ಬ್ರಾಹ್ಮಣ ಸಭಾದ ಮಹಿಳಾ ಘಟಕದ ಜಿಲ್ಲಾ ಕಾರ್ಯದರ್ಶಿ ಸೀಮಾ ಬಳ್ಳುಳ್ಳಾಯ, ಶಿವಳ್ಳಿ ಬ್ರಾಹ್ಮಣ ಸಭಾದ ಮಹಿಳಾ ಘಟಕದ ಜಿಲ್ಲಾ ಖಜಾಂಜಿ ಲತಾ ಸರಳಾಯ, ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಕಾರ್ಯದರ್ಶಿ ಕೆ ರಾಘವೇಂದ್ರ, ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಖಜಾಂಜಿ ರಾಜಾರಾಮ ಸರಳಾಯ, ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಯುವಶಕ್ತಿ ಅಧ್ಯಕ್ಷ ಪ್ರದೀಪ್ ಅಡಿಗ, ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಯುವಶಕ್ತಿ ಕಾರ್ಯದರ್ಶಿ ಚೇತನ್ ಡಿ, ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಯುವಶಕ್ತಿ ಖಜಾಂಜಿ ಶ್ರೀವತ್ಸ ಕೆ ಮೊದಲಾದವರು ಭಾಗವಹಿಸುವರು.