HEALTH TIPS

ಜ. 6ರಿಂದ ಶಿವಸಂಕಲ್ಪ ಅಭಿಯಾನ: ಮುಖ್ಯಮಂತ್ರಿ ಏಕನಾಥ್ ಶಿಂಧೆ

              ಮುಂಬೈ: ಶಿವಸಂಕಲ್ಪ ಅಭಿಯಾನದ ಅಂಗವಾಗಿ ಜನವರಿ 6ರಿಂದ ರಾಜ್ಯದ ಎಲ್ಲಾ 48 ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ.

               ವಿಡಿಯೊ ಕಾನ್ಫರೆನ್ಸ್‌ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 2024ರ ಮೊದಲ ಭಾಗದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಜ್ಜಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

             ಬಿಜೆಪಿ ಮತ್ತು ಎನ್‌ಸಿಪಿಯ ಅಜಿತ್‌ ಪವಾರ್ ಬಣವನ್ನು ಒಳಗೊಂಡಿರುವ ಆಡಳಿತಾರೂಢ ಮೈತ್ರಿಕೂಟ ಅಥವಾ 'ಮಹಾಯುತಿ' ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದರು.

ಶಿವಸಂಕಲ್ಪ ಯಾತ್ರೆಯು ಜ. 6ರಿಂದ ಯವತ್‌ಮಾಲ್‌-ವಾಶಿಂ ಕ್ಷೇತ್ರದಿಂದ ಆರಂಭವಾಗಲಿದೆ. ಶಿಂಧೆ ಅವರು ಒಂದು ತಿಂಗಳವರೆಗೆ ರಾಜ್ಯ ವಿವಿಧ ಭಾಗಗಳಲ್ಲಿ 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಕ್ಷ ಹೇಳಿದೆ.

                     2019ರ ಚುನಾವಣೆಯಲ್ಲಿ ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ ಬಿಜೆಪಿ 23 ಸ್ಥಾನಗಳಲ್ಲಿ ಗೆಲವು ಸಾಧಿಸಿತ್ತು. ಅವಿಭಜಿತ ಶಿವಸೇನಾ 18 ಮತ್ತು ಎನ್‌ಸಿಪಿ 4 ಸ್ಥಾನಗಳನ್ನು ಪಡೆದಿತ್ತು. ಕಾಂಗ್ರೆಸ್‌ ಮತ್ತು ಎಐಎಂಐಎಂ ತಲಾ ಒಂದು ಸ್ಥಾನ ಪಡೆದಿದ್ದರೆ, ಮತ್ತೊಂದು ಸ್ಥಾನ ಪಕ್ಷೇತರ ಅಭ್ಯರ್ಥಿಯ ಪಾಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries