ನಾಗ್ಪುರ: ಸೋಲಾರ್ ಇಂಡಸ್ಟ್ರೀಸ್ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಾಗ್ಪುರದ ಬಜಾರ್ಗಾಂವ್ನಲ್ಲಿ ನಡೆದಿದೆ.
ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ 9 ಮಂದಿ ಸಾವನ್ನಪ್ಪಿದರೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ನಂತರ ಸ್ಥಾವರದಲ್ಲಿ ಕಾಲ್ತುಳಿತ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದೆ.
ನಾಗ್ಪುರದ ಬಜಾರ್ಗಾಂವ್ನಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಭಾರೀ ಸ್ಫೋಟವು ಭೀತಿಯನ್ನು ಸೃಷ್ಟಿಸಿದೆ. ಸ್ಫೋಟದ ವೇಳೆ ಕಾರ್ಮಿಕರು ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು.
ಸಿಕ್ಕಿರುವ ಮಾಹಿತಿ ಪ್ರಕಾರ, ಕಾರ್ಮಿಕರು ಕಲ್ಲಿದ್ದಲು ಸ್ಫೋಟಕ್ಕೆ ಗನ್ ಪೌಡರ್ ಪ್ಯಾಕ್ ಮಾಡುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಪೊಲೀಸ್ ತಂಡ ಮತ್ತು ರಕ್ಷಣಾ ಕಾರ್ಯಾಚರಣೆ ತಂಡ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.
ಕಾರ್ಖಾನೆ ಸ್ಫೋಟದಲ್ಲಿ ಗಾಯಗೊಂಡಿರುವ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಸ್ಥೆಯಲ್ಲಿ ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಂಬಂಧಿತ ವಸ್ತುಗಳನ್ನು ಪೂರೈಸಲು ಕೆಲಸ ಮಾಡುತ್ತದೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ಘಟನೆಯನ್ನು ದುರದೃಷ್ಟಕರ ಎಂದು ಹೇಳಿದ್ದು, 9 ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡಲಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಿರ್ಧಾರವನ್ನು ಅನುಮೋದಿಸಿದ್ದಾರೆ ಎಂದು ಅವರು ಹೇಳಿದರು.
ಸೋಲಾರ್ ಇಂಡಸ್ಟ್ರೀಸ್ನಲ್ಲಿ ನಡೆದ ಸ್ಫೋಟದಲ್ಲಿ ಆರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ. ಇದು ಸಶಸ್ತ್ರ ಪಡೆಗಳಿಗೆ ಡ್ರೋನ್ ಮತ್ತು ಸ್ಫೋಟಕಗಳನ್ನು ತಯಾರಿಸುವ ಕಂಪನಿಯಾಗಿದೆ ಎಂದು ಅವರು ಹೇಳಿದರು.