HEALTH TIPS

ಕಡನ್ನಪ್ಪಳ್ಳಿ ರಾಮಚಂದ್ರನ್, ಕೆ. ಬಿ. ಗಣೇಶ್ ಕುಮಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

                    ತಿರುವನಂತಪುರ: ಕಡನ್ನಪ್ಪಳ್ಳಿ ರಾಮಚಂದ್ರನ್,  ಹಾಗೂ ಕೆ.ಬಿ. ಗಣೇಶ್ ಕುಮಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

                ರಾಜಭವನದಲ್ಲಿ ಇಂದು ಸಂಜೆ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಇಬ್ಬರಿಗೂ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ, ಇತರೆ ಸಚಿವರು, ಶಾಸಕರು ಉಪಸ್ಥಿತರಿದ್ದರು.

              ಕಡನ್ನಪ್ಪಳ್ಳಿ ರಾಮಚಂದ್ರನ್ ಸ್ವ ಗೌರವದಲ್ಲಿ ಮತ್ತು ಕೆ.ಬಿ. ಗಣೇಶ್ ಕುಮಾರ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಡನ್ನಪ್ಪಳ್ಳಿ ಅವರಿಗೆ ಬಂದರು ಖಾತೆ ಮತ್ತು ಗಣೇಶ್ ಕುಮಾರ್ ಅವರಿಗೆ ಸಾರಿಗೆ ಖಾತೆ ನೀಡುವ ಸಾಧ್ಯತೆ ಇದೆ. ಎರಡನೇ ಪಿಣರಾಯಿ ಸರ್ಕಾರ ಅಧಿಕಾರಕ್ಕೆ ಬಂದಾಗ ಇಬ್ಬರಿಗೂ ಎರಡೂವರೆ ವರ್ಷ ಸಚಿವ ಸ್ಥಾನ ನೀಡಲಾಗಿದೆ.

           ಗಣೇಶ್ ಕುಮಾರ್ ಚಲಚಿತ್ರ ಇಲಾಖೆಯಲ್ಲಿ ಆಸಕ್ತಿ ತೋರಿದ್ದರೂ ಸಿಗದೇ ಇರಬಹುದು. ಸದ್ಯ ಸಜಿ ಚೆರಿಯನ್ ಚಲಚಿತ್ರ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ. ಇದೇ ವೇಳೆ ಸಚಿವರ ಇಲಾಖೆಗಳಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಎಲ್ ಡಿಎಫ್ ಸಂಚಾಲಕ ಇ.ಪಿ. ಜಯರಾಜನ್ ಹೇಳಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries