ಕೊಚ್ಚಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬೆಂಗಾವಲು ವಾಹನದ ಮೇಲೆ ಶೂ ಎಸೆಯಲಾಗಿದ್ದು, ಈ ಸಂಬಂಧ ಕೇರಳ ವಿದ್ಯಾರ್ಥಿ ಸಂಘಟನೆಯ(ಕೆಎಸ್ಯು) ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದೊಂದು ಭಾವೋದ್ವೇಗದಿಂದ ಮಾಡಿರುವ ಕೃತ್ಯ ಎಂದು ಕಾಂಗ್ರೆಸ್ ಹೇಳಿದೆ.
ಕೊಚ್ಚಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬೆಂಗಾವಲು ವಾಹನದ ಮೇಲೆ ಶೂ ಎಸೆಯಲಾಗಿದ್ದು, ಈ ಸಂಬಂಧ ಕೇರಳ ವಿದ್ಯಾರ್ಥಿ ಸಂಘಟನೆಯ(ಕೆಎಸ್ಯು) ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದೊಂದು ಭಾವೋದ್ವೇಗದಿಂದ ಮಾಡಿರುವ ಕೃತ್ಯ ಎಂದು ಕಾಂಗ್ರೆಸ್ ಹೇಳಿದೆ.
ಐಪಿಸಿ ಸೆಕ್ಷನ್ 283(ಸಾರ್ವಜನಿಕ ಹಾದಿಯಲ್ಲಿ ಅಪಾಯ ಮತ್ತು ಅಡ್ಡಿಯುಂಟುಮಾಡುವುದು), 308(ಉದ್ದೇಶಪೂರ್ವಕವಾಗಿ ಹತ್ಯೆ ಯತ್ನ), 353ರ( ಹಲ್ಲೆ ಅಥವಾ ಸರ್ಕಾರಿ ಅಧಿಕಾರಿ ಕೆಲಸಕ್ಕೆ ಅಡ್ಡಿ) ಕಾಯ್ದೆಗಳ ಅಡಿ ಕುರುಪ್ಪಂಪಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ಪೆರುಂಬವೂರ್ನಿಂದ ಕೋಥಮಂಗಲಂಗೆ ತೆರಳುತ್ತಿದ್ದ ಸಿಎಂ ಬೆಂಗಾವಲು ವಾಹನದ ಮೇಲೆ ಶೂ ಎಸೆಯಲಾಗಿದ್ದು, ಈ ಸಂಬಂಧ ಕಾಂಗ್ರೆಸ್ನ ವಿದ್ಯಾರ್ಥಿ ಸಂಘಟನೆ ಕೆಎಸ್ಯುನ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಕಾಸರಗೋಡಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಇದು ಪ್ರಜಾಸತ್ತಾತ್ಮಕ ಪ್ರತಿಭಟನೆಯಲ್ಲ, ಶೂ ಎಸೆಯುವುದನ್ನು ಪ್ರೋತ್ಸಾಹಿಸುವುದಿಲ್ಲ, ಇದೊಂದು ಭಾವೋದ್ವೇಗದಿಂದ ಮಾಡಿದ ಕೃತ್ಯವಾಗಿದೆ ಎಂದು ಹೇಳಿದ್ದಾರೆ
'ಶೂ ಎಸೆದು ಪ್ರತಿಭಟಿಸುವುದನ್ನು ನಾನು ಪ್ರೋತ್ಸಾಹಿಸುವುದಿಲ್ಲ. ಈ ಘಟನೆಯು ಭಾವೋದ್ವೇಗದಿಂದ ಮಾಡಿದಂತೆ ತೋರುತ್ತಿದೆ. ನಮ್ಮ ಕಾರ್ಯಕರ್ತರನ್ನು ಥಳಿಸುತ್ತಿರುವ ದೃಶ್ಯವನ್ನು ಸುದ್ದಿ ವಾಹಿನಿಗಳಲ್ಲಿ ನೋಡಿದ್ದೇನೆ. ಆದರೆ, ಶೂ ಎಸೆದವರ ಮೇಲೆ ಹತ್ಯೆ ಯತ್ನ ಪ್ರಕರಣ ದಾಖಲಿಸುವ ಮೂಲಕ ನಮ್ಮ ಪೋಲೀಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿ ಅಣಕ ಮಾಡಿದ್ದಾರೆ' ಎಂದು ಅವರು ಆರೋಪಿಸಿದರು.
ಕೇರಳ ಮುಖ್ಯಮಂತ್ರಿ ಮತ್ತು ಸಂಪುಟ ಸದಸ್ಯರು ನಡೆಸುತ್ತಿರುವ ನವ ಕೇರಳ ಸಾದಾಸ್ ಯಾತ್ರೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು.