ತಿರುವನಂತಪುರಂ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಮುಖ ನಗರ ಪ್ರದೇಶಗಳಲ್ಲಿ ಉತ್ಸವದ ಕಳೆ ಏರುತ್ತಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆಚರಣೆ ವೇಳೆ ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವಂತೆ ಸೂಚಿಸಲಾಗಿದೆ. ದೇಶದಲ್ಲಿ ಅರ್ಧದಷ್ಟು ಕೊರೊನಾ ಪ್ರಕರಣಗಳು ಕೇರಳದಲ್ಲಿ ದೃಢಪಟ್ಟಿರುವ ಕಾರಣ ಎಚ್ಚರಿಕೆ ನೀಡಲಾಗಿದೆ.
ಪ್ರತಿದಿನ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿದೆ. ಇದರೊಂದಿಗೆ ಹೊಸ ವμರ್Áಚರಣೆ ನಂತರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಅಂದಾಜಿಸಿದೆ. ಒಮಿಕ್ರಾನ್ ಮತ್ತು ಜೆಎಚ್1 ಏರಿಕೆಯ ಸಂದರ್ಭದಲ್ಲಿ ಅತ್ಯಂತ ಜಾಗರೂಕರಾಗಿರಲು ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಜನರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಬೇಕು ಎಂದು ನಿರ್ದೇಶನದಲ್ಲಿ ಹೇಳಲಾಗಿದೆ. ಕರೋನಾ ದೃಢಪಟ್ಟರೆ ಕರ್ನಾಟಕದಲ್ಲಿ ಏಳು ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಏತನ್ಮಧ್ಯೆ, ಓಮಿಕ್ರಾನ್ ಮತ್ತು ಜೆಎನ್ 1 ರೂಪಾಂತರಗಳ ಹರಡುವಿಕೆ ಕೂಡ ಆತಂಕವನ್ನು ಉಂಟುಮಾಡುತ್ತಿದೆ.