HEALTH TIPS

ಉತ್ತರ ಪ್ರದೇಶ | ರೈಲು ಡಿಕ್ಕಿ-ಇಬ್ಬರು ರೈಲ್ವೆ ನೌಕರರು ಸಾವು, ಮತ್ತೊಬ್ಬರಿಗೆ ಗಾಯ

                ಬಾರಾಬಂಕಿ: ಜಹಾಂಗೀರಾಬಾದ್ ರೈಲು ನಿಲ್ದಾಣದ ಬಳಿ ಸಿಗ್ನಲ್ ಸರಿಪಡಿಸುವ ವೇಳೆ ಎದುರಿಗೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ರೈಲ್ವೆ ನೌಕರರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

                 ಅರವಿಂದ್ ಕುಮಾರ್ (28) ಹಾಗೂ ತಾಲಾ ಸೊರೆನ್ (45) ಮೃತರು. ‌ದೇವಿ ಪ್ರಸಾದ್ (30) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ‌ಗೊಂಡಾ-ಬಾರಾಬಂಕಿ ರೈಲ್ವೆ ವಿಭಾಗದ ಬಳಿ ಗುರುವಾರ ಈ ಘಟನೆ ನಡೆದಿದೆ.

               ಸಿಗ್ನಲ್ ಕಂಬವೊಂದರಲ್ಲಿ ದೋಷವನ್ನು ಸರಿಪಡಿಸುತ್ತಿದ್ದಾಗ ಕೊಚ್ಚಿನ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆ‌ದಿದೆ. ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ಸೊರೆನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರಸಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

               ಕುಮಾರ್ ಜಹಾಂಗೀರಾಬಾದ್ ರೈಲ್ವೆ ನಿಲ್ದಾಣದಲ್ಲಿ ಎಲೆಕ್ಟ್ರಿಷಿಯನ್ ಆಗಿ, ಸೊರೆನ್ ಸಿಗ್ನಲ್ ಸಹಾಯಕರಾಗಿ ಮತ್ತು ಪ್ರಸಾದ್ ರೈಲ್ವೆಯ ಗುತ್ತಿಗೆ ಉದ್ಯೋಗಿಯಾಗಿದ್ದರು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ಠಾಣೆಯ ಉಸ್ತುವಾರಿ ಧರ್ಮೇಂದ್ರ ಕುಮಾರ್ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries