HEALTH TIPS

ವಿಕಾಸ್ ಭಾರತ್ ಸಂಕಲ್ಪ ಯಾತ್ರೆ: ಕೇಂದ್ರದ ಯೋಜನೆಗಳ ಲಾಭವನ್ನು ಎಲ್ಲರಿಗೂ ತಲುಪಿಸಲು ಸರ್ಕಾರ ಬದ್ಧವಾಗಿದೆ: ಕೇಂದ್ರ ರಾಜ್ಯ ಸಚಿವ ಭಗವಂತ ಖೂಬಾ .

              ತ್ರಿಶೂರ್: ಕೇಂದ್ರ ಸರ್ಕಾರವು ತಂದಿರುವ ಯೋಜನೆಗಳ ಪ್ರಯೋಜನಗಳನ್ನು ತಳಮಟ್ಟದ ಎಲ್ಲರಿಗೂ ತಲುಪಿಸಲು ಬದ್ಧವಾಗಿದೆ ಎಂದು ಕೇಂದ್ರ ರಾಸಾಯನಿಕ ರಸಗೊಬ್ಬರಗಳು ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

            ಕೇಂದ್ರ ಸರ್ಕಾರದ ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ವಿಕಾಸ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ತ್ರಿಶೂರ್ ಮಟ್ಟತ್ತೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

             ಎಲ್ಲರಿಗೂ ಅಭಿವೃದ್ಧಿ ಎಂಬುದು ಕೇಂದ್ರ ಸರ್ಕಾರದ ಧ್ಯೇಯವಾಗಿದೆ ಎಂದು ಖೂಬಾ ಹೇಳಿದರು. ಜಾತಿ, ಧರ್ಮ, ವರ್ಗ, ವರ್ಣ ಭೇದವಿಲ್ಲದೆ ಎಲ್ಲರ ಅಭಿವೃದ್ಧಿ ಸಾಧ್ಯ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

               ಕಳೆದ 10 ವಷರ್Àಗಳಲ್ಲಿ ಭಾರತದಲ್ಲಿ ಮೂಲಸೌಕರ್ಯ ಅಭಿವೃದ್ಧಿ ವಿಶ್ವದರ್ಜೆಯ ಗುಣಮಟ್ಟಕ್ಕೆ ಏರಿದೆ. ಇಂದು ಇಡೀ ಜಗತ್ತು ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಎದುರು ನೋಡುತ್ತಿದೆ. ದೇಶದಲ್ಲಿ ಸ್ಟಾರ್ಟಪ್‍ಗಳ ಸಂಖ್ಯೆ ನೂರು ಮತ್ತು ಹತ್ತು ಸಾವಿರಕ್ಕೆ ಏರಿದೆ ಎಂದು ಕೇಂದ್ರ ಸಚಿವರು ಹೇಳಿದರು. ಕೇಂದ್ರದ ಯೋಜನೆಗಳ ಮಾಹಿತಿಯನ್ನು ಎಲ್ಲ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಪ್ರಧಾನಮಂತ್ರಿ ವಿಕಾಸ ಭಾರತ ಸಂಕಲ್ಪ ಯಾತ್ರೆ ಆರಂಭಿಸಲಾಗಿದೆ ಎಂದರು.

               ತ್ರಿಶೂರ್ ಸಹಾಯಕ ಕಲೆಕ್ಟರ್ ಕಾರ್ತಿಕ್ ಪಾಣಿಗ್ರಾಹಿ, ಕೆನರಾ ಬ್ಯಾಂಕ್ ತ್ರಿಶೂರ್ ಪ್ರಾದೇಶಿಕ ಸಹಾಯಕ ವ್ಯವಸ್ಥಾಪಕ ಕೆ.ಎಸ್.ರಾಜೇಶ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಮೋಹನ ಚಂದ್ರನ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಟಿ. ರಮೇಶ್, ವಾರ್ಡ್ ಸದಸ್ಯ ಹಿತೇಶ್ ಕೆ.ಟಿ ಮತ್ತಿತರರು ಮಾತನಾಡಿದರು. ಸಮಾರಂಭದಲ್ಲಿ ಕೇಂದ್ರ ರಾಜ್ಯ ಸಚಿವರು ಅರ್ಜಿದಾರರಿಗೆ ಮಂಜೂರಾದ ಸಾಲಗಳ ಅನುಮೋದನೆ ಪತ್ರಗಳನ್ನು ಹಸ್ತಾಂತರಿಸಿದರು. ವಿವಿಧ ಕಲಾ ಕಾರ್ಯಕ್ರಮಗಳೂ ನಡೆದವು.

               ಮಧ್ಯಾಹ್ನ ನೆನ್ಮಣಿಕರ ಪಂಚಾಯಿತಿಯಲ್ಲಿ ನಡೆದ ವಿಕಾಸ್ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ರಾಜ್ಯ ಸಚಿವರೂ ಪಾಲ್ಗೊಂಡರು. ರೈತರು, ಯುವಕರು, ಮಹಿಳೆಯರು ಮತ್ತು ಬಡವರ ಅಭ್ಯುದಯವೇ ಪ್ರಧಾನಿಯವರ ಮೊದಲ ಆದ್ಯತೆ ಎಂದು ಕೇಂದ್ರ ರಾಜ್ಯ ಸಚಿವರು ಹೇಳಿದರು. ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಮೋಹನ ಚಂದ್ರನ್, ಎಸ್ ಬಿಐ ಅಡ್ಮಿನ್ ಡೆಪ್ಯುಟಿ ಜನರಲ್ ಮ್ಯಾನೇಜರ್ ರವಿಕಿರಣ್ ಮೊದಲಾದವರು ಮಾತನಾಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries