HEALTH TIPS

ನವಕೇರಳ ಸಮಾವೇಶ ವೆಚ್ಚಕ್ಕೆ ಹಣ ಸಂಗ್ರಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

                ಎರ್ನಾಕುಳಂ: ಮುಖ್ಯಮಂತ್ರಿಗಳ ನವಕೇರಳ ಸಮಾವೇಶಕ್ಕೆ ಹಣ ಸಂಗ್ರಹಿಸುವಂತೆ  ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದ ಸರ್ಕಾರದ ಆದೇಶಕ್ಕೆ ತಡೆ ನೀಡಲಾಗಿದೆ.

            ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುವ ನವಕೇರಳ ಸಮಾವೇಶ ನಡೆಸಲು ಜಿಲ್ಲಾಧಿಕಾರಿಗಳು ಜಾಹೀರಾತು ಮೂಲಕ ಹಣ ಸಂಗ್ರಹಿಸಬೇಕು ಎಂಬುದು ಸರ್ಕಾರದ ಆದೇಶವಾಗಿತ್ತು. ಈ ಆದೇಶಕ್ಕೆ ಈಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.


            ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಹಣ ಸಂಗ್ರಹಣೆ ಮತ್ತು ಲೆಕ್ಕಪತ್ರ ನಿರ್ವಹಣೆಗೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಪತ್ತನಂತಿಟ್ಟ ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ. ಆದರೆ ಹಣ ಸಂಗ್ರಹ ಆದೇಶಕ್ಕೆ ಸಂಪೂರ್ಣವಾಗಿ ತಡೆ ನೀಡಿಲ್ಲ.

             ಸರ್ಕಾರದ ಆದೇಶ ಅಖಿಲ ಭಾರತ ಸೇವಾ ನಿಯಮಗಳಿಗೆ ವಿರುದ್ಧವಾಗಿದೆ ಎಂಬುದು ಅರ್ಜಿಯಲ್ಲಿನ ವಾದವಾಗಿತ್ತು. ಕಾರ್ಯಕ್ರಮದ ವೆಚ್ಚವನ್ನು ಜಿಲ್ಲಾಧಿಕಾರಿಗಳು ಸಂಗ್ರಹ  ಮಾಡಬೇಕೆಂಬ ಸರ್ಕಾರದ ಆದೇಶವನ್ನು ಅಕ್ರಮ ಎಂದು ಘೋ|ಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿತ್ತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries