ಎರ್ನಾಕುಳಂ: ಮುಖ್ಯಮಂತ್ರಿಗಳ ನವಕೇರಳ ಸಮಾವೇಶಕ್ಕೆ ಹಣ ಸಂಗ್ರಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದ ಸರ್ಕಾರದ ಆದೇಶಕ್ಕೆ ತಡೆ ನೀಡಲಾಗಿದೆ.
ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುವ ನವಕೇರಳ ಸಮಾವೇಶ ನಡೆಸಲು ಜಿಲ್ಲಾಧಿಕಾರಿಗಳು ಜಾಹೀರಾತು ಮೂಲಕ ಹಣ ಸಂಗ್ರಹಿಸಬೇಕು ಎಂಬುದು ಸರ್ಕಾರದ ಆದೇಶವಾಗಿತ್ತು. ಈ ಆದೇಶಕ್ಕೆ ಈಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಹಣ ಸಂಗ್ರಹಣೆ ಮತ್ತು ಲೆಕ್ಕಪತ್ರ ನಿರ್ವಹಣೆಗೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಪತ್ತನಂತಿಟ್ಟ ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ. ಆದರೆ ಹಣ ಸಂಗ್ರಹ ಆದೇಶಕ್ಕೆ ಸಂಪೂರ್ಣವಾಗಿ ತಡೆ ನೀಡಿಲ್ಲ.
ಸರ್ಕಾರದ ಆದೇಶ ಅಖಿಲ ಭಾರತ ಸೇವಾ ನಿಯಮಗಳಿಗೆ ವಿರುದ್ಧವಾಗಿದೆ ಎಂಬುದು ಅರ್ಜಿಯಲ್ಲಿನ ವಾದವಾಗಿತ್ತು. ಕಾರ್ಯಕ್ರಮದ ವೆಚ್ಚವನ್ನು ಜಿಲ್ಲಾಧಿಕಾರಿಗಳು ಸಂಗ್ರಹ ಮಾಡಬೇಕೆಂಬ ಸರ್ಕಾರದ ಆದೇಶವನ್ನು ಅಕ್ರಮ ಎಂದು ಘೋ|ಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿತ್ತು.