HEALTH TIPS

ಜಮ್ಮು ಮತ್ತು ಕಾಶ್ಮೀರ : ಉಗ್ರರ ದಾಳಿ ವೇಳೆ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಸಾವು

           ವದೆಹಲಿ: ಶ್ರೀನಗರದಲ್ಲಿ ಅಕ್ಟೋಬರ್‌ 29ರಂದು ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿ ವೇಳೆ ಗಾಯಗೊಂಡಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಇನ್ಸ್‌ಪೆಕ್ಟರ್ ಮಸ್ರೂರ್ ವಾನಿ ಅವರು ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್)ನಲ್ಲಿ ಗುರುವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

             ಗಾಯಗೊಂಡಿದ್ದ ಮಸ್ರೂರ್ ವಾನಿ ಅವರನ್ನು ತಕ್ಷಣವೇ ಶ್ರೀನಗರದ ಶೇರ್-ಎ-ಕಾಶ್ಮೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಿದ್ದೆವು. ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ಬುಧವಾರ ಸ್ಥಳಾಂತರಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

                 ಅಕ್ಟೋಬರ್ 29 ರಂದು ಶ್ರೀನಗರದ ಈದ್ಗಾ ಮೈದಾನದಲ್ಲಿ ಸ್ಥಳೀಯ ಯುವಕರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ, ಇನ್ಸ್‌ಪೆಕ್ಟರ್ ಮಸ್ರೂರ್ ವಾನಿ ಅವರ ಮೇಲೆ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries