HEALTH TIPS

ಗಾಜಾ ಬಿಕ್ಕಟ್ಟು: ಭದ್ರತಾ ಮಂಡಳಿಗೆ ಎಚ್ಚರಿಕೆ ನೀಡಿದ ಗುಟೆರೆಸ್

            ವಿಶ್ವಸಂಸ್ಥೆ: ಗಾಜಾದಲ್ಲಿನ ದುರಂತದ ಕುರಿತು ಭದ್ರತಾ ಮಂಡಳಿಗೆ ಎಚ್ಚರಿಕೆ ನೀಡಲು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಅಪರೂಪವಾಗಿ ಬಳಸುವ ಅಧಿಕಾರವನ್ನು ಬಳಸಿದ್ದಾರೆ. ಕದನ ವಿರಾಮ ಘೋಷಿಸಲು ತಕ್ಷಣವೇ ಒತ್ತಾಯಿಸುವಂತೆಯೂ ಸದಸ್ಯರಿಗೆ ಸೂಚಿಸಿದ್ದಾರೆ.

              ಎರಡು ತಿಂಗಳ ಯುದ್ಧದ ಪರಿಣಾಮವಾಗಿ ಗಾಜಾದಲ್ಲಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ನಾಗರಿಕರ ಸುರಕ್ಷತೆಗೆ ಒತ್ತಾಯಿಸಿ ಎಂದು ಭದ್ರತಾ ಮಂಡಳಿಯ 15 ಸದಸ್ಯರಿಗೆ ಬರೆದಿರುವ ಪತ್ರದಲ್ಲಿ ಅವರು ಹೇಳಿದ್ದಾರೆ.

             ಎಲ್ಲಾ ಪ್ರಭಾವಗಳನ್ನು ಬಳಸಿ ಈ ಬಿಕ್ಕಟ್ಟನ್ನು ಪರಿಹರಿಸುವ ಜವಾಬ್ದಾರಿ ಅಂತರರಾಷ್ಟ್ರೀಯ ಸಮುದಾಯಗಳ ಮೇಲಿದೆ ಎಂದೂ ಹೇಳಿದ್ದಾರೆ.

                ಆಂಟೋನಿಯೊ ಗುಟೆರೆಸ್‌ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಇಸ್ರೇಲ್‌, 'ಅವರ ಅಧಿಕಾರಾವಧಿಯಲ್ಲಿ ವಿಶ್ವಶಾಂತಿಗೆ ಅಪಾಯವಿದೆ' ಎಂದಿದೆ. ಗುಟೆರೆಸ್‌ ಅವರ ನಡೆಯು ಹಮಾಸ್‌ ಉಗ್ರರಿಗೆ ಬೆಂಬಲ ಸೂಚಿಸುವಂತಿದೆ ಎಂದೂ ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries