ಮಾಸ್ಕೋ: ಭಾರತ ಮತ್ತು ರಷ್ಯಾ ನಡುವಿನ ಸಂಬಂಧ ಕೇವಲ ರಾಜಕೀಯ ಅಥವಾ ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ್ದಲ್ಲ, ಅದು ತುಂಬಾ ನಿಕಟವಾದದ್ದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಗುರುವಾರ ಹೇಳಿದ್ದಾರೆ.
ಮಾಸ್ಕೋ: ಭಾರತ ಮತ್ತು ರಷ್ಯಾ ನಡುವಿನ ಸಂಬಂಧ ಕೇವಲ ರಾಜಕೀಯ ಅಥವಾ ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ್ದಲ್ಲ, ಅದು ತುಂಬಾ ನಿಕಟವಾದದ್ದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಗುರುವಾರ ಹೇಳಿದ್ದಾರೆ.
ರಷ್ಯಾಕ್ಕೆ ಐದು ದಿನಗಳ ಪ್ರವಾಸದಲ್ಲಿರುವ ಜೈಶಂಕರ್, ಸೇಂಟ್ ಪೀಟರ್ಸ್ಬರ್ಗ್ ಸ್ಟೇಟ್ ಯೂನಿವರ್ಸಿಟಿಯಲ್ಲಿನ ಭಾರತ ಮೂಲದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವಾಗ ಈ ಹೇಳಿಕೆ ನೀಡಿದ್ದಾರೆ.
'ಸೇಂಟ್ ಪೀಟರ್ಸ್ಬರ್ಗ್ ಸ್ಟೇಟ್ ಯೂನಿವರ್ಸಿಟಿಯ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಸಂತೋಷವಾಗಿದೆ. ಶೈಕ್ಷಣಿಕ ಮತ್ತು ಬೌದ್ಧಿಕ ಪ್ರಪಂಚವು ನಮ್ಮ ಸಂಬಂಧವನ್ನು ಪೋಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಭಾರತೀಯ ವಿದ್ಯಾರ್ಥಿಗಳು ಎರಡೂ ದೇಶಗಳಲ್ಲಿ ಸಾಮಾಜಿಕ ಭಾವನೆಗಳನ್ನು ರೂಪಿಸುತ್ತಾರೆ. ನಮ್ಮ ಸಹಕಾರವನ್ನು ಇನ್ನೂ ಗಾಢವಾಗಿಸುವ ಮಾರ್ಗಗಳು ಹಾಗೂ ವಿಧಾನಗಳ ಬಗ್ಗೆ ಚರ್ಚಿಸಲಾಗಿದೆ' ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬುಧವಾರ(ಡಿ.27) ಜೈಶಂಕರ್ ಅವರು ಮಾಸ್ಕೋದ ಕ್ರೆಮ್ಲಿನ್ನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದರು. ಉಕ್ರೇನ್ ಮೇಲೆ ಮಾಸ್ಕೋದ ಆಕ್ರಮಣದ ಹೊರತಾಗಿಯೂ ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಗಟ್ಟಿಯಾಗಿ ಉಳಿದಿವೆ. ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಇನ್ನೂ ಖಂಡಿಸಿಲ್ಲ. ಆದರೆ ರಾಜತಾಂತ್ರಿಕ ಮಾತುಕತೆಯ ಮೂಲಕ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಪ್ರತಿಪಾದಿಸಿದೆ.