HEALTH TIPS

ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವ ಸಂಪನ್ನ

 



                ಕಾಸರಗೋಡು: ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವವು ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈದಿಕ ಧಾರ್ಮಿಕ ಸಾಂಸ್ಕøತಿಕ ಸಮಾರಂಭಗಳೊಂದಿಗೆ  ಸಂಪನ್ನಗೊಂಡಿತು. 


            ಅಭಿಷೇಕ ಪೂಜೆ, ಉಷಪೂಜೆ, ಗಣಹೋಮ, ಕಲಶಪೂಜೆ, ಶ್ರೀ ದೇವರಿಗೆ ನವಕಾಭಿಷೇಕ, ಭಕ್ತರಿಂದ ತುಲಾಭಾರ ಸೇವೆ,  ಶ್ರೀ ಭೂತಬಲಿ,  ಮುಳಿಯಾರು ಸ್ಕಂದ ನಿನಾದ ಸಂಗೀತ ಶಾಲೆಯ ಗುರು ಉಷಾ ಈಶ್ವರ ಭಟ್ ಮತ್ತು ಶಿಷ್ಯರಿಂದ ಸಂಗೀತ ಸೇವೆ, ಕೋಟೂರಿಗೆ ಕಟ್ಟೆ ಸವಾರಿಯಾಗಿ ಹಿಂತಿರುಗಿದ ಬಳಿಕ ಕಟ್ಟೆಪೂಜೆ, ರಾಜಾಂಗಣದಲ್ಲಿ ನೃತ್ಯಸೇವೆ ಜರುಗಿತು.  ಉತ್ಸವದ ಅಂಗವಾಗಿ ಮಲ್ಲ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾ ಮಂಡಳಿಯಿಂದ ಯಕ್ಷಗಾನ ಬಯಲಾಟ ಸೇವೆಯು ಜರಗಿತು. 

                  ರಾಜಾಂಗಣದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಧ್ಯಾಹ್ನ ವಿಷ್ಣುಮೂರ್ತಿ ದೈವದ ಕೋಲ ಜರುಗಿತು.  ಶ್ರೀ ಗಿರೀಶ ಅಡಿಗ ಕರಿಚೇರಿ ಅವರಿಂದ ದೇವರ ನೃತ್ಯಸೇವೆ , ದರ್ಶನಬಲಿ, ರಾತ್ರಿ ಶ್ರೀರಂಗಪೂಜೆ ನೆರವೇರಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries