HEALTH TIPS

ಹಿಮಪಾತ: ಅಟಲ್‌ ಸುರಂಗದಲ್ಲಿ ಸಿಲುಕಿದ್ದ 300 ಪ್ರವಾಸಿಗರ ರಕ್ಷಣೆ

            ಕುಲು : ಭಾರಿ ಹಿಮಪಾತದಿಂದಾಗಿ ಅಟಲ್‌ ಸುರಂಗದಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ಹಿಮಾಚಲ ಪ್ರದೇಶ ಪೊಲೀಸರು ರಕ್ಷಿಸಿದ್ದಾರೆ.

           ಹಿಮಾಚಲ ಪ್ರದೇಶ ರಾಜ್ಯ ಸಾರಿಗೆ ಬಸ್‌ ಸೇರಿ ಸುಮಾರು 50 ವಾಹನಗಳು ಅಟಲ್‌ ಸುರಂಗದಲ್ಲಿ ಸಿಲುಕಿದ್ದವು, ಎಲ್ಲಾ ವಾಹನಗಳನ್ನು ಮತ್ತು ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ ಎಂದು ಕುಲು ಪೊಲೀಸ್‌ ವರಿಷ್ಠಾಧಿಕಾರಿ ಸಾಕ್ಷಿ ವೆರ್ಮಾ ತಿಳಿಸಿದ್ದಾರೆ.


              ಮುಂದಿನ 48 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಎತ್ತರದ ಪ್ರದೇಶದಲ್ಲಿ ಹಿಮಪಾತ ಮತ್ತು ಮಳೆ ಬೀಳುವ ಸಾಧ್ಯತೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

              ಚಂಬಾ, ಕಂಗ್ರಾ, ಸ್ಪಿತಿ, ಮಂಡಿ, ಶಿಮ್ಲಾ ಸೇರಿ ಹಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries