ಕುಂಬಳೆ: ಆರಿಕ್ಕಾಡಿ ಶ್ರೀ ಮಲ್ಲಿಕಾರ್ಜುನ ನಾಗಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಬುಧವಾರ ಬೆಳಗ್ಗೆ ಗಣಪತಿ ಹೋಮ, ಪ್ರತಿಷ್ಠಾ ಹೋಮ, ನಾಗ ಬಿಂಬ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಆಶ್ಲೇಷ ಬಲಿ, ನಾಗತಂಬಿಲ, ವಿವಿಧ ಸಂಘ ಸಂಸ್ಥೆಗಳಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಜ.2 ರಂದು ವಿವಿಧ ಸಂಘಸಂಸ್ಥೆಗಳಿಂದ ಭಜನೆ, ಸಂಜೆ ತಂತ್ರಿವರೇಣ್ಯರ ಆಗಮನ, ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ಸ್ವಸ್ತೀ ಪುಣ್ಯಾಹವಾಚನ, ಸ್ಥಳಶುದ್ಧಿ, ವಾಸ್ತು ಹೋಮ, ಪ್ರಕಾರ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಬಲಿ, ದಿಕ್ಪಾಲ ಬಲಿ, ನಾಗಬಿಂಬ ಅಧಿವಾಸ, ಕಲಶಾಧಿವಾಸ, ಅಧಿವಾಸ ಹೋಮ ನಡೆಯಿತು.