HEALTH TIPS

ರಜೌರಿ- ಪೂಂಛ್‌ನಲ್ಲಿ ಉಗ್ರರ ಉಪಟಳ ಹೆಚ್ಚಳ: ಸೇನಾ ಮುಖ್ಯಸ್ಥ

             ಖನೌ: 'ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಪೀರ್‌ ಪಂಜಾಲ್‌ ಮತ್ತು ರಜೌರಿ- ಪೂಂಛ್‌ ಪ್ರದೇಶಗಳಲ್ಲಿ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಾಗಿವೆ' ಎಂದು ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಸೋಮವಾರ ತಿಳಿಸಿದ್ದಾರೆ.

               ಲಖನೌನಲ್ಲಿ ನಡೆದ 76ನೇ ಸೇನಾ ದಿನದ ಪ‍ರೇಡ್‌ನಲ್ಲಿ ಮಾತನಾಡಿದ ಅವರು, 'ಭದ್ರತಾ ಪಡೆಗಳ ಸತತ ಪರಿಶ್ರಮದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ' ಎಂದರು.

                'ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ಇದೆ. ಆದರೆ, ದೇಶದ ಒಳಗೆ ಉಗ್ರರು ನುಸುಳುವ ಯತ್ನಗಳನ್ನು ಗಮನಿಸಿದಾಗ, ಗಡಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಡಿಮೆಯಾಗಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಅನೇಕ ಒಳನುಸುಳುವಿಕೆ ಸಂಚುಗಳನ್ನು ಸೇನೆ ವಿಫಲಗೊಳಿಸಿದೆ' ಎಂದು ತಿಳಿಸಿದರು.


            'ಈಶಾನ್ಯ ಭಾರತದಲ್ಲಿ ಇತ್ತೀಚೆಗೆ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಶಾಂತಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಅಲ್ಲದೇ ಬಂಡುಕೋರ ಗುಂಪುಗಳೊಂದಿಗೆ ಶಾಂತಿ ಮಾತುಕತೆ ನಡೆಸಲಾಗಿದೆ. ಇದರ ಫಲವಾಗಿ ಆ ಪ್ರದೇಶದಲ್ಲಿ ಇಂದು ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಶಾಂತಿಯನ್ನು ಮರುಸ್ಥಾಪಿಸುವ ವಿಚಾರದಲ್ಲಿ ಭಾರತದ ಕ್ರಿಯಾಶೀಲ ನೀತಿಗಳು ಮಹತ್ವದ ಪಾತ್ರ ವಹಿಸುತ್ತವೆ. ಸರ್ಕಾರದ ನೀತಿ ಮತ್ತು ಸೇನೆಯ ಪರಿಶ್ರಮದಿಂದ ಇಂದು ಮಣಿಪುರದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಿದೆ' ಎಂದು ಪಾಂಡೆ ಅಭಿಪ್ರಾಯಪಟ್ಟರು.

                 'ಸೇನೆಯು ಉತ್ತರ ಗಡಿಯಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧ ಮತ್ತು ಸಮರ್ಥವಾಗಿದೆ. ಗಡಿ ಪ್ರದೇಶಗಳಲ್ಲಿ ಅತ್ಯಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಗಮನವನ್ನು ನೀಡಲಾಗಿದ್ದು, ಉತ್ತಮ ಪ್ರಗತಿಯನ್ನೂ ಸಾಧಿಸಲಾಗಿದೆ' ಎಂದು ಜನರಲ್‌ ಮನೋಜ್‌ ಪಾಂಡೆ ಹೇಳಿದರು.

 ಉತ್ತರಪ್ರದೇಶದ ಲಖನೌನಲ್ಲಿ ನಡೆದ 76ನೇ ಆರ್ಮಿ ಡೇ ಪರೇಡ್‌ ಅಂಗವಾಗಿ ಯೋಧರೊಬ್ಬರು ಪ್ಯಾರಾಗ್ಲೈಡಿಂಗ್‌ ಸಾಹಸ ಪ್ರದರ್ಶಿಸಿದರು -ಪಿಟಿಐ ಚಿತ್ರ

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries