HEALTH TIPS

ಕಾಂಗ್ರೆಸ್‌, ಎಡಪಕ್ಷಗಳಿಂದ ಮಹಿಳಾ ಮೀಸಲಾತಿ ಮಸೂದೆ ವಿಳಂಬ: ಪ್ರಧಾನಿ ಮೋದಿ

               ತ್ರಿಶ್ಯೂರ್‌: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಉದ್ದೇಶದ ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡುವುದನ್ನು ಕಾಂಗ್ರೆಸ್‌ ಮತ್ತು ಎಡಪಕ್ಷಗಳು ವಿಳಂಬ ಮಾಡಿದವು. ಆದರೆ, ಈ ಮಸೂದೆ ಜಾರಿಗೆ ಕ್ರಮ ಕೈಗೊಳ್ಳುವ ಮೂಲಕ ಬಿಜೆಪಿಯು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಇಲ್ಲಿ ಹೇಳಿದರು.

               ಇಲ್ಲಿ ನಡೆದ ಮಹಿಳೆಯರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ನಾರಿ ಶಕ್ತಿ ವಂದನೆ ಅಧಿನಿಯಮ (ಮಹಿಳಾ ಮೀಸಲಾತಿ) ಈಗ ಕಾನೂನಾಗಿದೆ. ಮಹಿಳಾ ಸಬಲೀಕರಣದ ಬಗ್ಗೆ ತಮಗಿರುವ ಬದ್ಧತೆಯನ್ನು ಈ ರೀತಿ ತೋರ್ಪಡಿಸಿರುವುದಾಗಿ ಹೇಳಿದರು.

               ಜೊತೆಗೆ, 'ತ್ರಿವಳಿ ತಲಾಖ್‌ನಿಂದ ಮುಕ್ತಿ ದೊರಕಿಸಿಕೊಡುವುದಾಗಿ ನಾನು ಮುಸ್ಲಿಂ ಮಹಿಳೆಯರಿಗೆ ಭರವಸೆ ನೀಡಿದ್ದೆ. ಅದನ್ನೂ ಈಡೇರಿಸಿದ್ದೇನೆ' ಎಂದರು.

               ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್‌ ಮತ್ತು ಎಡಪಕ್ಷಗಳು ಮಹಿಳೆಯರ ಶಕ್ತಿಗುಂದಿಸಿದ್ದು ದುರದೃಷ್ಟಕರ ಎಂದ ಅವರು, ಬಡವರು, ಮಹಿಳೆಯರು, ಯುವಜನರು ಮತ್ತು ರೈತರ ಏಳಿಗೆಯು ರಾಷ್ಟ್ರದ ಏಳಿಗೆಯನ್ನು ಖಾತ್ರಿಪಡಿಸುತ್ತದೆ ಎಂದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries