HEALTH TIPS

ಗುಜರಾತ್ ದೋಣಿ ದುರಂತ: ಕೋಟಿಯಾ ಪ್ರಾಜೆಕ್ಟ್ಸ್‌ ಸಂಸ್ಥೆಯ ಗುತ್ತಿಗೆ ರದ್ದು

              ಡೋದರಾ: ದೋಣಿ ಮುಳುಗಿ 12 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಹರ್ನಿ ಪ್ರದೇಶದಲ್ಲಿರುವ ಕೆರೆಯಲ್ಲಿ ವಿಹಾರ ಮತ್ತು ಮನರಂಜನೆ ಚಟುವಟಿಕೆಗಳ ನಿರ್ವಹಣೆ ಮಾಡುತ್ತಿದ್ದ ಕೋಟಿಯಾ ಪ್ರಾಜೆಕ್ಟ್ಸ್‌ ಸಂಸ್ಥೆಯ ಗುತ್ತಿಗೆಯನ್ನು ವಡೋದರಾ ನಗರ ಪಾಲಿಕೆ (ವಿಎಂಸಿ) ರದ್ದುಗೊಳಿಸಿದೆ.

            ಶಾಲಾ ಮಕ್ಕಳು ಮತ್ತು ಶಿಕ್ಷಕರು ತುಂಬಿದ್ದ ದೋಣಿ ಗುರುವಾರ ಮಧ್ಯಾಹ್ನ ಹರ್ನಿಯ ಮೋಟ್‌ನಾಥ್ ಕೆರೆಯಲ್ಲಿ ಮುಳುಗಿತ್ತು. ದೋಣಿಯಲ್ಲಿ ನಿಗದಿತ ಜನರಿಗಿಂತ ದುಪ್ಪಟ್ಟು ಮಂದಿಯನ್ನು ತುಂಬಲಾಗಿತ್ತು ಮತ್ತು ಪ್ರಯಾಣಿಕರಿಗೆ ಜೀವ ರಕ್ಷಕ ಸಾಧನಗಳನ್ನು ಒದಗಿಸದಿದ್ದುದೇ ಅನಾಹುತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

              ಕೆರೆ ಪ್ರದೇಶದಲ್ಲಿ ವಿಹಾರ ಮತ್ತು ಮನರಂಜನೆ ಚಟುವಟಿಕೆಗಳ ನಿರ್ವಹಣೆಗಾಗಿ ಸಂಸ್ಥೆಗೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries