HEALTH TIPS

ಹಣ ಅಕ್ರಮ ವರ್ಗಾವಣೆ: ಜಾರ್ಖಂಡ್‌ ಸಿಎಂ ಸೊರೇನ್ ನಿವಾಸಕ್ಕೆ ಇ.ಡಿ ಅಧಿಕಾರಿಗಳು

            ವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಸಂಬಂಧ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಇಂದು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ನವದೆಹಲಿಯ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.

             ಭೂ ವಂಚನೆ ಪ್ರಕರಣದಲ್ಲಿ ಇತ್ತೀಚಿನ ಹಣ ವರ್ಗಾವಣೆ ಸಂಬಂಧ ಜನವರಿ 20ರಂದು ರಾಂಚಿಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಇ.ಡಿ ಅಧಿಕಾರಿಗಳು ಮಾಡಿದ್ದ ದಾಳಿಗೆ ಸಂಬಂಧಿಸಿದ ತನಿಖೆ ಇದಾಗಿದೆ ಎಂದೂ ಮೂಲಗಳು ಖಚಿತಪಡಿಸಿವೆ.

            ಜನವರಿ 29 ಅಥವಾ ಜನವರಿ 31ರಂದು ವಿಚಾರಣೆಗೆ ಅವರ ಲಭ್ಯತೆಯನ್ನು ಖಚಿತಪಡಿಸುವಂತೆ ಕಳೆದ ವಾರ ಇ.ಡಿ ಸೊರೇನ್ ಅವರಿಗೆ ಹೊಸ ಸಮನ್ಸ್ ನೀಡಿತ್ತು ಎಂದು ಮೂಲಗಳು ತಿಳಿಸಿವೆ.

              ಜಾರ್ಖಂಡ್‌ನಲ್ಲಿ ಮಾಫಿಯಾದಿಂದ ಅಪಾರ ಪ್ರಮಾಣದ ಭೂಮಿಯ ಅಕ್ರಮ ಪರಭಾರೆಗೆ ಸಂಬಂಧಿಸಿದ ತನಿಖೆ ಇದಾಗಿದೆ ಎಂದೂ ಮೂಲಗಳಿಂದ ತಿಳಿದುಬಂದಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries